ತಾಲೂಕಿನ ಮೇಲಿನನಾಯಕರಂಡನಹಳ್ಳಿ ಗ್ರಾಮದಲ್ಲಿ ಮೇಕೆ, ಕುರಿ ಕಳ್ಳರ ಹಾವಳಿ ಹೆಚ್ಚಾಗಿದೆ. ಮೇಕೆ, ಕುರಿ ಕಳ್ಳರ ಉಪಟಳದಿಂದ ಅಪಾರ ನಷ್ಟಕ್ಕೆ ಗ್ರಾಮಸ್ಥರು ಒಳಗಾಗುತ್ತಿದ್ದಾರೆ. ಕಳ್ಳರು ರಾತ್ರೋರಾತ್ರಿ ಕುರಿ, ಮೇಕೆ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಾರೆ.ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕುರಿ ಮೇಕೆ ಕಳ್ಳರ ಹಾವಳಿ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಮೊದಲ ದಿನ ನಾಲ್ಕು ಮೇಕೆಗಳನ್ನ ಕದ್ದೊಯ್ದ ಕಳ್ಳರು, ಮರುದಿನ ಮತ್ತು ನಿನ್ನೆ ರಾತ್ರಿ ಮತ್ತೆ ಗ್ರಾಮಕ್ಕೆ ದಾಳಿ ಇಟ್ಟು ಕಳ್ಳತನ ಯತ್ನ ನಡೆಸಿದ್ದಾರೆ.
ಮೂರು ದಿನಗಳ ಹಿಂದೆಯಷ್ಟೇ ಗ್ರಾಮದಲ್ಲಿ ಮೇಕೆಗಳ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮದ ನರಸಪ್ಪ ಎಂಬುವವರ ಮೇಕೆ ದೊಡ್ಡಿಯ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಾಲ್ಕು ಮೇಕೆಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಘಟನೆಯಾದ ಮರುದಿನ ಸಹ ಗ್ರಾಮಕ್ಕೆ ಕಳ್ಳರು ದಾಳಿ ನಡೆಸಿದ್ದಾರೆ. ತೋಟದಲ್ಲಿನ ಮೇಕೆ ಸಾಕಾಣಿಕೆಯ ಶೆಡ್ಡಿಗೆ ಕಳ್ಳರು ನುಗ್ಗಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಎಚ್ಚೇತ್ತ ಗ್ರಾಮಸ್ಥರು ಮಚ್ಚು, ದೊಣ್ಣೆಗಳಿಂದ ಹಲ್ಲೆಗೆ ಮುಂದಾಗುತ್ತಿದ್ದಂತೆ ಕಳ್ಳರು ಪರಾರಿಯಾಗಿದ್ದರು.
ನಿನ್ನೆ ರಾತ್ರಿಯು ಸಹ ಗ್ರಾಮಕ್ಕೆ ಕಳ್ಳರು ಬಂದಿದ್ದಾರೆ, ಗ್ರಾಮದ ಅಂಚಿನ ಶಶಿಕುಮಾರ್ ರವರ ಮೇಕೆ ದೊಡ್ಡಿಗೆ ಕಳ್ಳರು ನುಗ್ಗಿದ್ದಾರೆ, ಬಾಗಿಲಿನ ಬೀಗಿ ಹೊಡೆಯುತ್ತಿದ್ದ ಶಬ್ದಕ್ಕೆ ಶಶಿಕುಮಾರ್ ಮನೆಯಿಂದ ಹೊರಬರುತ್ತಿದ್ದಂತೆ ಕಳ್ಳರು ಇನೋವಾ ಕಾರಿನಲ್ಲಿ ಪರಾರಿಯಾಗಿದ್ದಾರೆ. ಕಾರಿಗೆ ಯಾವುದೇ ರೀತಿಯ ನಂಬರ್ ಪ್ಲೇಟ್ ಇರಲಿಲ್ಲ, ಗುರುತು ಸಿಗದ ರೀತಿಯಲ್ಲಿ ಮುಖವನ್ನ ಬಟ್ಟೆಯಿಂದ ಸುತ್ತಿಕೊಂಡಿದ್ದರು ಮತ್ತು ಮಧ್ಯ ರಾತ್ರಿ 12 ಗಂಟೆಯಿಂದ ಮುಂಜಾನೆ 3 ಗಂಟೆಯ ನಡುವೆ ಗ್ರಾಮಕ್ಕೆ ಕಳ್ಳರು ನುಗ್ಗುತ್ತಿದ್ದಾರೆಂದು ಗ್ರಾಮಸ್ಥರು ತಮ್ಮ ಆತಂಕವನ್ನ ವ್ಯಕ್ತಪಡಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಆರು ತಿಂಗಳಿದ ಈಚೆಗೆ ವಿವಿಧ ಗ್ರಾಮಗಳಲ್ಲಿ ಕುರಿ, ಮೇಕೆ, ರಾಸುಗಳ ಕಳವು ಪ್ರಕರಣಗಳು ನಡೆಯುತ್ತಲೇ ಇವೆ. ಆದರೆ ಇದುವರೆಗೂ ಒಂದೇ ಒಂದು ಪ್ರಕಣದಲ್ಲೂ ಕಳ್ಳರು ಪತ್ತೆಯಾಗಿಲ್ಲ. ಇದರಿಂದ ರೈತರು ಆತಂಕದಲ್ಲಿಯೇ ರಾತ್ರಿ ಕಳೆಯುವಂತೆ ಮಾಡಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…