ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago