ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.
ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.
ನೂತನ ಪದ್ಧತಿ ತಂದ ಚೀಲದ ಸಮಸ್ಯೆ
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.
ರೈತರ ಅಳಲು
ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.
ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…