ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

4 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

5 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

6 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

8 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

11 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

13 hours ago