ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

1 hour ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

12 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

13 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

1 day ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

1 day ago