ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

11 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

12 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

18 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

19 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago