ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

47 minutes ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

54 minutes ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

13 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

14 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

1 day ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

1 day ago