ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

21 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago