ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

12 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago