ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

33 minutes ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

3 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

4 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

18 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

20 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

23 hours ago