ತಾಲೂಕಿನ ಲಘುಮೇನಹಳ್ಳಿ ಗ್ರಾಮದಲ್ಲಿ ಚಿರತೆ‌ ಪ್ರತ್ಯಕ್ಷ; ಸಿಸಿಟಿವಿಯಲ್ಲಿ ದೃಶ್ಯ ಸರೆ

ತಾಲೂಕಿನ ಲಘುಮೇನಹಳ್ಳಿ ಗ್ರಾಮದಲ್ಲಿ ಫೆ.17ರ ರಾತ್ರಿ 11 ಗಂಟೆ ಸಮಯದಲ್ಲಿ ಚಿರತೆ ಪ್ರತ್ಯಕ್ಷವಾಗಿರೋ ಘಟನೆ ನಡೆದಿದೆ. ಚಿರತೆ ಓಡಾಡುವ ದೃಶ್ಯ ರೆಸಾರ್ಟ್ ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಡವಾಗಿ ಬೆಳಕಿಗೆ ಬಂದಿದೆ.

ಚಿರತೆ ಇರುವ ದೃಶ್ಯ ಕಂಡು ಗ್ರಾಮದಲ್ಲಿ ಆತಂಕ ಮನೆ ಮಾಡಿದೆ, ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಒಬ್ಬೊಬ್ಬರೇ ಹೊಲ, ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.

ಇತ್ತೀಚೆಗೆ ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ.

ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 minutes ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

2 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

2 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

3 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

7 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

8 hours ago