ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದಲೇ ಅಬಕಾರಿ ಇಲಾಖೆಗೆ ದೂರು

ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ ಯುವಕರು ಅಬಕಾರಿ ನಿರೀಕ್ಷಕರ ಕಚೇರಿಗೆ ದೂರು ನೀಡಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ಗ್ರಾಮದ ಯುವಕ ಪುನೀತ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ದುಡಿಮೆಯನ್ನೇ ನಂಬಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಗ್ರಾಮಸ್ಥರು ಕುಡಿತದ ಚಟಕ್ಕೆ ಬಿದ್ದು ಹಾಳಾಗುತ್ತಿದ್ದಾರೆ, ಅಕ್ರಮ ಮದ್ಯ ಮಾರಾಟ ಹೆಚ್ಚಳದಿಂದ ದಿನನಿತ್ಯ ಮನೆಗಳಲ್ಲಿ, ಊರುಗಳಲ್ಲಿ ಕುಡುಕರ ಗಲಾಟೆ, ಸಾಮಾನ್ಯ ಜನರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ, ಇದರಿಂದ ಗ್ರಾಮದಲ್ಲಿ ಅಶಾಂತಿ ಉಂಟಾಗುತ್ತಿದೆ.

ಅಕ್ರಮ ಮದ್ಯ ಮಾರಾಟಗಾರರು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿ ಸಂಸಾರಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಮಕ್ಕಳು ಹೆಂಗಸರು ಕೂಡ ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ದಿನನಿತ್ಯ ಗ್ರಾಮಗಳಲ್ಲಿ ಅವ್ಯಾಚ ಶಬ್ಧಗಳು, ನಿಂದನೆ ಹೆಚ್ಚಾಗುತ್ತಿದೆ.

ದೊಡ್ಡಬೆಳವಂಗಲ ಹೋಬಳಿಯ ಹಳೆಕೋಟೆ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಈ ಸಮಸ್ಯೆ ಕುರಿತು ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಮನೆಗಳ ಮೇಲೆ ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಸುಮ್ಮನಾಗುತ್ತಾರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಇದೇ ಧೈರ್ಯದಿಂದ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗ್ರಾಮದ ಹಲವು ಮನೆಗಳಲ್ಲಿ ಮತ್ತೆ ಮದ್ಯ ಮಾರಾಟ ಪ್ರಾರಂಭಿಸುತ್ತಿದ್ದಾರೆ,

ಹಳೇಕೋಟೆ ಗ್ರಾಮಕ್ಕೆ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಸಕ್ಕರೆಗೊಲ್ಲಹಳ್ಳಿ, ಜ್ಯೋತಿಪುರ, ಗ್ರಾಮಗಳಿಂದ ಮದ್ಯ ಬರುತ್ತಿದ್ದೂ ಸುತ್ತಲೂರಿನ ಜನರು ಗ್ರಾಮಕ್ಕೆ ಆಗಮಿಸಿ ಮದ್ಯ ಖರೀದಿಸಿ ಹೋಗುತ್ತಿದ್ದಾರೆ,

ಇನ್ನಾದರೂ ಅಧಿಕಾರಿಗಳು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದ ಜನತೆಯ ಕುಂಟುಬಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡರು.

ಈ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮದ ಯುವಕರು ಇದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago