ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ ಯುವಕರು ಅಬಕಾರಿ ನಿರೀಕ್ಷಕರ ಕಚೇರಿಗೆ ದೂರು ನೀಡಿದ್ದಾರೆ.
ಅಕ್ರಮ ಮದ್ಯ ಮಾರಾಟಗಾರರು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿ ಸಂಸಾರಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಮಕ್ಕಳು ಹೆಂಗಸರು ಕೂಡ ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ದಿನನಿತ್ಯ ಗ್ರಾಮಗಳಲ್ಲಿ ಅವ್ಯಾಚ ಶಬ್ಧಗಳು, ನಿಂದನೆ ಹೆಚ್ಚಾಗುತ್ತಿದೆ.
ದೊಡ್ಡಬೆಳವಂಗಲ ಹೋಬಳಿಯ ಹಳೆಕೋಟೆ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಈ ಸಮಸ್ಯೆ ಕುರಿತು ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಮನೆಗಳ ಮೇಲೆ ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಸುಮ್ಮನಾಗುತ್ತಾರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಇದೇ ಧೈರ್ಯದಿಂದ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗ್ರಾಮದ ಹಲವು ಮನೆಗಳಲ್ಲಿ ಮತ್ತೆ ಮದ್ಯ ಮಾರಾಟ ಪ್ರಾರಂಭಿಸುತ್ತಿದ್ದಾರೆ,
ಹಳೇಕೋಟೆ ಗ್ರಾಮಕ್ಕೆ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಸಕ್ಕರೆಗೊಲ್ಲಹಳ್ಳಿ, ಜ್ಯೋತಿಪುರ, ಗ್ರಾಮಗಳಿಂದ ಮದ್ಯ ಬರುತ್ತಿದ್ದೂ ಸುತ್ತಲೂರಿನ ಜನರು ಗ್ರಾಮಕ್ಕೆ ಆಗಮಿಸಿ ಮದ್ಯ ಖರೀದಿಸಿ ಹೋಗುತ್ತಿದ್ದಾರೆ,
ಇನ್ನಾದರೂ ಅಧಿಕಾರಿಗಳು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದ ಜನತೆಯ ಕುಂಟುಬಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮದ ಯುವಕರು ಇದ್ದರು.
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…