ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ ಯುವಕರು ಅಬಕಾರಿ ನಿರೀಕ್ಷಕರ ಕಚೇರಿಗೆ ದೂರು ನೀಡಿದ್ದಾರೆ.
ಅಕ್ರಮ ಮದ್ಯ ಮಾರಾಟಗಾರರು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿ ಸಂಸಾರಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಮಕ್ಕಳು ಹೆಂಗಸರು ಕೂಡ ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ದಿನನಿತ್ಯ ಗ್ರಾಮಗಳಲ್ಲಿ ಅವ್ಯಾಚ ಶಬ್ಧಗಳು, ನಿಂದನೆ ಹೆಚ್ಚಾಗುತ್ತಿದೆ.
ದೊಡ್ಡಬೆಳವಂಗಲ ಹೋಬಳಿಯ ಹಳೆಕೋಟೆ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಈ ಸಮಸ್ಯೆ ಕುರಿತು ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಮನೆಗಳ ಮೇಲೆ ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಸುಮ್ಮನಾಗುತ್ತಾರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಇದೇ ಧೈರ್ಯದಿಂದ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗ್ರಾಮದ ಹಲವು ಮನೆಗಳಲ್ಲಿ ಮತ್ತೆ ಮದ್ಯ ಮಾರಾಟ ಪ್ರಾರಂಭಿಸುತ್ತಿದ್ದಾರೆ,
ಹಳೇಕೋಟೆ ಗ್ರಾಮಕ್ಕೆ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಸಕ್ಕರೆಗೊಲ್ಲಹಳ್ಳಿ, ಜ್ಯೋತಿಪುರ, ಗ್ರಾಮಗಳಿಂದ ಮದ್ಯ ಬರುತ್ತಿದ್ದೂ ಸುತ್ತಲೂರಿನ ಜನರು ಗ್ರಾಮಕ್ಕೆ ಆಗಮಿಸಿ ಮದ್ಯ ಖರೀದಿಸಿ ಹೋಗುತ್ತಿದ್ದಾರೆ,
ಇನ್ನಾದರೂ ಅಧಿಕಾರಿಗಳು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದ ಜನತೆಯ ಕುಂಟುಬಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮದ ಯುವಕರು ಇದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…