ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ ಯುವಕರು ಅಬಕಾರಿ ನಿರೀಕ್ಷಕರ ಕಚೇರಿಗೆ ದೂರು ನೀಡಿದ್ದಾರೆ.
ಅಕ್ರಮ ಮದ್ಯ ಮಾರಾಟಗಾರರು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿ ಸಂಸಾರಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಮಕ್ಕಳು ಹೆಂಗಸರು ಕೂಡ ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ದಿನನಿತ್ಯ ಗ್ರಾಮಗಳಲ್ಲಿ ಅವ್ಯಾಚ ಶಬ್ಧಗಳು, ನಿಂದನೆ ಹೆಚ್ಚಾಗುತ್ತಿದೆ.
ದೊಡ್ಡಬೆಳವಂಗಲ ಹೋಬಳಿಯ ಹಳೆಕೋಟೆ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಈ ಸಮಸ್ಯೆ ಕುರಿತು ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಮನೆಗಳ ಮೇಲೆ ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಸುಮ್ಮನಾಗುತ್ತಾರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಇದೇ ಧೈರ್ಯದಿಂದ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗ್ರಾಮದ ಹಲವು ಮನೆಗಳಲ್ಲಿ ಮತ್ತೆ ಮದ್ಯ ಮಾರಾಟ ಪ್ರಾರಂಭಿಸುತ್ತಿದ್ದಾರೆ,
ಹಳೇಕೋಟೆ ಗ್ರಾಮಕ್ಕೆ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಸಕ್ಕರೆಗೊಲ್ಲಹಳ್ಳಿ, ಜ್ಯೋತಿಪುರ, ಗ್ರಾಮಗಳಿಂದ ಮದ್ಯ ಬರುತ್ತಿದ್ದೂ ಸುತ್ತಲೂರಿನ ಜನರು ಗ್ರಾಮಕ್ಕೆ ಆಗಮಿಸಿ ಮದ್ಯ ಖರೀದಿಸಿ ಹೋಗುತ್ತಿದ್ದಾರೆ,
ಇನ್ನಾದರೂ ಅಧಿಕಾರಿಗಳು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದ ಜನತೆಯ ಕುಂಟುಬಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮದ ಯುವಕರು ಇದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…