ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದಲೇ ಅಬಕಾರಿ ಇಲಾಖೆಗೆ ದೂರು

ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ ಯುವಕರು ಅಬಕಾರಿ ನಿರೀಕ್ಷಕರ ಕಚೇರಿಗೆ ದೂರು ನೀಡಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ಗ್ರಾಮದ ಯುವಕ ಪುನೀತ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ದುಡಿಮೆಯನ್ನೇ ನಂಬಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಗ್ರಾಮಸ್ಥರು ಕುಡಿತದ ಚಟಕ್ಕೆ ಬಿದ್ದು ಹಾಳಾಗುತ್ತಿದ್ದಾರೆ, ಅಕ್ರಮ ಮದ್ಯ ಮಾರಾಟ ಹೆಚ್ಚಳದಿಂದ ದಿನನಿತ್ಯ ಮನೆಗಳಲ್ಲಿ, ಊರುಗಳಲ್ಲಿ ಕುಡುಕರ ಗಲಾಟೆ, ಸಾಮಾನ್ಯ ಜನರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ, ಇದರಿಂದ ಗ್ರಾಮದಲ್ಲಿ ಅಶಾಂತಿ ಉಂಟಾಗುತ್ತಿದೆ.

ಅಕ್ರಮ ಮದ್ಯ ಮಾರಾಟಗಾರರು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿ ಸಂಸಾರಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಮಕ್ಕಳು ಹೆಂಗಸರು ಕೂಡ ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ದಿನನಿತ್ಯ ಗ್ರಾಮಗಳಲ್ಲಿ ಅವ್ಯಾಚ ಶಬ್ಧಗಳು, ನಿಂದನೆ ಹೆಚ್ಚಾಗುತ್ತಿದೆ.

ದೊಡ್ಡಬೆಳವಂಗಲ ಹೋಬಳಿಯ ಹಳೆಕೋಟೆ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಈ ಸಮಸ್ಯೆ ಕುರಿತು ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಮನೆಗಳ ಮೇಲೆ ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಸುಮ್ಮನಾಗುತ್ತಾರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಇದೇ ಧೈರ್ಯದಿಂದ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗ್ರಾಮದ ಹಲವು ಮನೆಗಳಲ್ಲಿ ಮತ್ತೆ ಮದ್ಯ ಮಾರಾಟ ಪ್ರಾರಂಭಿಸುತ್ತಿದ್ದಾರೆ,

ಹಳೇಕೋಟೆ ಗ್ರಾಮಕ್ಕೆ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಸಕ್ಕರೆಗೊಲ್ಲಹಳ್ಳಿ, ಜ್ಯೋತಿಪುರ, ಗ್ರಾಮಗಳಿಂದ ಮದ್ಯ ಬರುತ್ತಿದ್ದೂ ಸುತ್ತಲೂರಿನ ಜನರು ಗ್ರಾಮಕ್ಕೆ ಆಗಮಿಸಿ ಮದ್ಯ ಖರೀದಿಸಿ ಹೋಗುತ್ತಿದ್ದಾರೆ,

ಇನ್ನಾದರೂ ಅಧಿಕಾರಿಗಳು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದ ಜನತೆಯ ಕುಂಟುಬಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡರು.

ಈ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮದ ಯುವಕರು ಇದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

5 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

9 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

10 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

15 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

17 hours ago