ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ ಯುವಕರು ಅಬಕಾರಿ ನಿರೀಕ್ಷಕರ ಕಚೇರಿಗೆ ದೂರು ನೀಡಿದ್ದಾರೆ.
ಅಕ್ರಮ ಮದ್ಯ ಮಾರಾಟಗಾರರು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿ ಸಂಸಾರಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಮಕ್ಕಳು ಹೆಂಗಸರು ಕೂಡ ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ದಿನನಿತ್ಯ ಗ್ರಾಮಗಳಲ್ಲಿ ಅವ್ಯಾಚ ಶಬ್ಧಗಳು, ನಿಂದನೆ ಹೆಚ್ಚಾಗುತ್ತಿದೆ.
ದೊಡ್ಡಬೆಳವಂಗಲ ಹೋಬಳಿಯ ಹಳೆಕೋಟೆ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಈ ಸಮಸ್ಯೆ ಕುರಿತು ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಮನೆಗಳ ಮೇಲೆ ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಸುಮ್ಮನಾಗುತ್ತಾರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಇದೇ ಧೈರ್ಯದಿಂದ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗ್ರಾಮದ ಹಲವು ಮನೆಗಳಲ್ಲಿ ಮತ್ತೆ ಮದ್ಯ ಮಾರಾಟ ಪ್ರಾರಂಭಿಸುತ್ತಿದ್ದಾರೆ,
ಹಳೇಕೋಟೆ ಗ್ರಾಮಕ್ಕೆ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಸಕ್ಕರೆಗೊಲ್ಲಹಳ್ಳಿ, ಜ್ಯೋತಿಪುರ, ಗ್ರಾಮಗಳಿಂದ ಮದ್ಯ ಬರುತ್ತಿದ್ದೂ ಸುತ್ತಲೂರಿನ ಜನರು ಗ್ರಾಮಕ್ಕೆ ಆಗಮಿಸಿ ಮದ್ಯ ಖರೀದಿಸಿ ಹೋಗುತ್ತಿದ್ದಾರೆ,
ಇನ್ನಾದರೂ ಅಧಿಕಾರಿಗಳು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದ ಜನತೆಯ ಕುಂಟುಬಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮದ ಯುವಕರು ಇದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…