ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದಲೇ ಅಬಕಾರಿ ಇಲಾಖೆಗೆ ದೂರು

ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ ಯುವಕರು ಅಬಕಾರಿ ನಿರೀಕ್ಷಕರ ಕಚೇರಿಗೆ ದೂರು ನೀಡಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ಗ್ರಾಮದ ಯುವಕ ಪುನೀತ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ದುಡಿಮೆಯನ್ನೇ ನಂಬಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಗ್ರಾಮಸ್ಥರು ಕುಡಿತದ ಚಟಕ್ಕೆ ಬಿದ್ದು ಹಾಳಾಗುತ್ತಿದ್ದಾರೆ, ಅಕ್ರಮ ಮದ್ಯ ಮಾರಾಟ ಹೆಚ್ಚಳದಿಂದ ದಿನನಿತ್ಯ ಮನೆಗಳಲ್ಲಿ, ಊರುಗಳಲ್ಲಿ ಕುಡುಕರ ಗಲಾಟೆ, ಸಾಮಾನ್ಯ ಜನರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ, ಇದರಿಂದ ಗ್ರಾಮದಲ್ಲಿ ಅಶಾಂತಿ ಉಂಟಾಗುತ್ತಿದೆ.

ಅಕ್ರಮ ಮದ್ಯ ಮಾರಾಟಗಾರರು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿ ಸಂಸಾರಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಮಕ್ಕಳು ಹೆಂಗಸರು ಕೂಡ ಮದ್ಯಪಾನಕ್ಕೆ ದಾಸರಾಗುತ್ತಿದ್ದಾರೆ, ದಿನನಿತ್ಯ ಗ್ರಾಮಗಳಲ್ಲಿ ಅವ್ಯಾಚ ಶಬ್ಧಗಳು, ನಿಂದನೆ ಹೆಚ್ಚಾಗುತ್ತಿದೆ.

ದೊಡ್ಡಬೆಳವಂಗಲ ಹೋಬಳಿಯ ಹಳೆಕೋಟೆ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಈ ಸಮಸ್ಯೆ ಕುರಿತು ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಮನೆಗಳ ಮೇಲೆ ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಸುಮ್ಮನಾಗುತ್ತಾರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಇದೇ ಧೈರ್ಯದಿಂದ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗ್ರಾಮದ ಹಲವು ಮನೆಗಳಲ್ಲಿ ಮತ್ತೆ ಮದ್ಯ ಮಾರಾಟ ಪ್ರಾರಂಭಿಸುತ್ತಿದ್ದಾರೆ,

ಹಳೇಕೋಟೆ ಗ್ರಾಮಕ್ಕೆ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಸಕ್ಕರೆಗೊಲ್ಲಹಳ್ಳಿ, ಜ್ಯೋತಿಪುರ, ಗ್ರಾಮಗಳಿಂದ ಮದ್ಯ ಬರುತ್ತಿದ್ದೂ ಸುತ್ತಲೂರಿನ ಜನರು ಗ್ರಾಮಕ್ಕೆ ಆಗಮಿಸಿ ಮದ್ಯ ಖರೀದಿಸಿ ಹೋಗುತ್ತಿದ್ದಾರೆ,

ಇನ್ನಾದರೂ ಅಧಿಕಾರಿಗಳು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಗ್ರಾಮದ ಜನತೆಯ ಕುಂಟುಬಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡರು.

ಈ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮದ ಯುವಕರು ಇದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago