ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಇಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ನೂರಾರು ಟ್ರ್ಯಾಕ್ಟರ್ ಮೂಲಕ ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಸಾವಿರಾರು ರೈತರು ಬಂದು ಪ್ರತಿಭಟನೆ ನಡೆಸಿದರು…
ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…
ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು ಆಗ್ರಹಿಸಿದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…