ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಇಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ನೂರಾರು ಟ್ರ್ಯಾಕ್ಟರ್ ಮೂಲಕ ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಸಾವಿರಾರು ರೈತರು ಬಂದು ಪ್ರತಿಭಟನೆ ನಡೆಸಿದರು…
ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…
ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು ಆಗ್ರಹಿಸಿದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…