ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ, ಕಡತಗಳ ಪರಿಶೀಲನೆ ಆರಂಭಿಸಲಾಗಿದೆ. ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಗೋಮಾಳ ಜಮೀನು ಒತ್ತುವರಿಗೆ ಸಂಬಂಧಿಸಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಲೋಕಾಯುಕ್ತ ಎಸ್ಪಿ ವಲೀ ಬಾಷ, ಡಿವೈಎಸ್ಪಿಗಳಾದ ಉಮಾಶಂಕರ್ , ರಾಮಕೃಷ್ಣ ,ಇನ್ಸ್ ಪೆಕ್ಟರ್ ಗಳಾದ ಸಲೀ ಅಹಮದ್ , ಶಿವರುದ್ರಪ್ ಮೇಟಿ ಸೇರಿದಂತೆ ಸಿಬ್ಬಂದಿ ದಾಖಲೆಗಳ ಪರಿಶೀಲನೆಯಲ್ಲಿ ಪಾಲ್ಗೊಂಡಿದ್ದಾರೆ.
ಇದೇ ವೇಳೆ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರು ಅಧಿಕಾರಿಗಳ ಬಳಿ ದೂರಿದ್ದಾರೆ.