ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ಆರೋಪ: ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಇಂದು(ಡಿ.4) ಎಸಿ ಕಚೇರಿ ಮುಂದೆ ಸಿಪಿಐಎಂ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಸರಿಪಡಿಸುವಂತೆ ಹಾಗೂ ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಡಿ.4ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ ಹೇಳಿದರು.

ಮಂಗಳವಾರ ನಗರದ ಸಿಪಿಐಎಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಉಳ್ಳವರಿಗಷ್ಟೇ ಸೀಮಿತವಾಗಿದೆ. ಬಡ ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನಮ್ಮ ಬೇಡಿಕೆಗಳಿಗೆ ಸೂಕ್ತ ಉತ್ತರ ನೀಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಬಗರ್ ಹುಕ್ಕಂ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಆಯಾ ಹೋಬಳಿಗಳ ನಾಡಕಚೇರಿಗಳಲ್ಲಿ ಪ್ರಕಟಿಸಬೇಕು. ಸರ್ಕಾರಿ ಸ್ವತ್ತುಗಳು ಉಳ್ಳವರ ಪಾಲಾಗುತ್ತಿವೆ ಇವುಗಳ ರಕ್ಷಣೆಗೆ ತಾಲ್ಲೂಕು ಆಡಳಿತ ಮುಂದಾಗುತ್ತಿಲ್ಲ. ನಗರದ ತಾಲ್ಲೂಕು ಕಚೇರಿ ಆವರಣ ಕಸದ ತಿಪ್ಪೆಯಂತಾಗಿದ್ದರು ಸ್ವಚ್ಛತೆ ಕಡೆಗೆ ಯಾವುದೇ ಗಮನವನ್ನು ನೀಡುತ್ತಿಲ್ಲ. ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದಾಗಿವೆ ಎಂದು ದೂರಿದರು.

ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ ಮಾತನಾಡಿ, ತಹಶೀಲ್ದಾರ್,ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಭೂ ವ್ಯಾಜ್ಯ ಸೇರಿದಂತೆ ಇತರೆ ಪ್ರಕರಣಗಳ ವಿಚಾರಣೆ ಮುಗಿದು ಆದೇಶಕ್ಕೆ ಕಾಯ್ದಿರಿಸಿದ ನಂತರ ಆದೇಶ ಪ್ರಕಟಿಸಲು ದಿನಾಂಕ ನಿಗದಿಯಾಗಬೇಕು. ಆದೇಶದ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಗುಮಾಸ್ತರ ಬಳಿಗೆ ಅಲೆದಾಡುವ ಪ್ರರಿಸ್ಥಿತಿಯನ್ನು ತಪ್ಪಿಸಬೇಕು ಎಂದರು.

ಸಿಪಿಐಎಂ ರಾಜ್ಯ ಮುಖಂಡರಾದ ಬೆಳವಂಗಲಪ್ರಭಾ ಮಾತನಾಡಿ, ತಾಲ್ಲೂಕು ಕಚೇರಿಯಿಂದ ಮಹಿಳೆಯರು ವಂಶವೃಕ್ಷ ಪಡೆಯಲು ಅರ್ಜಿ ಸಲ್ಲಿಸಿದರೆ ನಿರಾಕರಿಸುತ್ತಿದ್ದಾರೆ. ತಾಲ್ಲೂಕು ಕಚೇರಿಯಿಂದ ಯಾವುದೇ ರೀತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಅರ್ಜಿಸಲ್ಲಿಸುವ ಸಮಾನ ಹಕ್ಕು ಮಹಿಳೆಯರಿಗು ಇದೆ. ಆಡಳಿತದ ಮುಖ್ಯ ಸ್ಥಾನಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದರೆ ಮಹಿಳೆಯರು ಸೇರಿದಂತೆ ಬಡವರಿಗೆ ನ್ಯಾಯ ದೊರೆಯುತ್ತದೆ ಎನ್ನುವ ನಂಭಿಕೆ ಇದೆ. ಆದರೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಮಹಿಳೆಯರೆ ಇದ್ದರು ಸಹ ಆಡಳಿತ ಸಂಪೂರ್ಣವಾಗಿ ಕುಸಿತವಾಗಿದೆ. ಅಧಿಕಾರಿಗಳನ್ನು ಸಾರ್ವಜನಿಕರು ಭೇಟಿ ಮಾಡುವ ಸಮಯದಲ್ಲು ಸಹ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯ ಇರುವುದೇ ಇಲ್ಲ. ಮುಖ್ಯ ಅಧಿಕಾರಿಗಳೆ ಕಚೇರಿಯಲ್ಲಿ ಇಲ್ಲದ ಮೇಲೆ ಇತರೆ ಸಿಬ್ಬಂದಿಯು ಕಚೇರಿಯಲ್ಲಿ ಸಾರ್ವಜನಿಕರ ಕೈಗೆ ಸಿಗುವುದೇ ಅಪರೂಪವಾಗಿದೆ ಎಂದು ದೂರಿದರು.

ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡ ಸಿ.ಎಚ್.ರಾಮಕೃಷ್ಣ ಮಾತನಾಡಿ, ನಾಡಕಚೇರಿಗಳ ವಿದ್ಯುತ್ ಬಿಲ್ ಪಾವತಿ ಮಾಡದೇ ಇರುವುದರಿಂದ ಬೆಸ್ಕಾಂ ವಿದ್ಯುತ್ ಸರಬರಾಜು ನಿಲ್ಲಿಸಿದೆ. ಶನಿವಾರದಿಂದಲು ನಾಡ ಕಚೇರಿಗಳಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಎಲ್ಲಾ ಅಗತ್ಯ ದಾಖಲೆಗಳು ಇದ್ದರು ಸಹ ಪೌತಿ ಖಾತೆಗಳಿಗೆ ಅರ್ಜಿ ಸಲ್ಲಿಸಲು ಗ್ರಾಮಲೆಕ್ಕಾಧಿಕಾರಿಗಳಿಂದ ಸಹಿ ಪಡೆಯಬೇಕು ಎನ್ನುವ ನಿಯಮ ಅವೈಜ್ಞಾನಿಕವಾಗಿದೆ. ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಆನ್ಲೈನ್ ಮಾಡಲಾಗಿದೆ. ಆದರೆ, ತಾಂತ್ರಿಕ ತೊಂದರೆಗಳನ್ನು ನಿವಾರಣೆ ಮಾಡುವ ಸೂಕ್ತ ಸಿಬ್ಬಂದಿ ಇಲ್ಲದೆ ಆನ್ಲೈನ್ ಸೇವೆಗಳಿಗೆ ಸಾರ್ವಜನಿಕರು ಬೇಸತ್ತು ಹೋಗುವಂತಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ವಿಷಕಂಠ, ಸಿಪಿಐಎಂ ಮುಖಂಡರಾದ ಪಿ.ಎ.ವೆಂಕಟೇಶ್, ಮಂಜುನಾಥ್,ಪ್ರಜಾ ವಿಮೋಚನ ಸಮಿತಿ ಮುಖಂಡ ಗೂಳ್ಯಹನುಮಣ್ಣ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಇದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

3 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

3 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

5 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

16 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

19 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

21 hours ago