ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ಆರೋಪ: ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಇಂದು(ಡಿ.4) ಎಸಿ ಕಚೇರಿ ಮುಂದೆ ಸಿಪಿಐಎಂ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಸರಿಪಡಿಸುವಂತೆ ಹಾಗೂ ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಡಿ.4ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ ಹೇಳಿದರು.

ಮಂಗಳವಾರ ನಗರದ ಸಿಪಿಐಎಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಉಳ್ಳವರಿಗಷ್ಟೇ ಸೀಮಿತವಾಗಿದೆ. ಬಡ ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನಮ್ಮ ಬೇಡಿಕೆಗಳಿಗೆ ಸೂಕ್ತ ಉತ್ತರ ನೀಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಬಗರ್ ಹುಕ್ಕಂ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಆಯಾ ಹೋಬಳಿಗಳ ನಾಡಕಚೇರಿಗಳಲ್ಲಿ ಪ್ರಕಟಿಸಬೇಕು. ಸರ್ಕಾರಿ ಸ್ವತ್ತುಗಳು ಉಳ್ಳವರ ಪಾಲಾಗುತ್ತಿವೆ ಇವುಗಳ ರಕ್ಷಣೆಗೆ ತಾಲ್ಲೂಕು ಆಡಳಿತ ಮುಂದಾಗುತ್ತಿಲ್ಲ. ನಗರದ ತಾಲ್ಲೂಕು ಕಚೇರಿ ಆವರಣ ಕಸದ ತಿಪ್ಪೆಯಂತಾಗಿದ್ದರು ಸ್ವಚ್ಛತೆ ಕಡೆಗೆ ಯಾವುದೇ ಗಮನವನ್ನು ನೀಡುತ್ತಿಲ್ಲ. ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದಾಗಿವೆ ಎಂದು ದೂರಿದರು.

ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ ಮಾತನಾಡಿ, ತಹಶೀಲ್ದಾರ್,ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಭೂ ವ್ಯಾಜ್ಯ ಸೇರಿದಂತೆ ಇತರೆ ಪ್ರಕರಣಗಳ ವಿಚಾರಣೆ ಮುಗಿದು ಆದೇಶಕ್ಕೆ ಕಾಯ್ದಿರಿಸಿದ ನಂತರ ಆದೇಶ ಪ್ರಕಟಿಸಲು ದಿನಾಂಕ ನಿಗದಿಯಾಗಬೇಕು. ಆದೇಶದ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಗುಮಾಸ್ತರ ಬಳಿಗೆ ಅಲೆದಾಡುವ ಪ್ರರಿಸ್ಥಿತಿಯನ್ನು ತಪ್ಪಿಸಬೇಕು ಎಂದರು.

ಸಿಪಿಐಎಂ ರಾಜ್ಯ ಮುಖಂಡರಾದ ಬೆಳವಂಗಲಪ್ರಭಾ ಮಾತನಾಡಿ, ತಾಲ್ಲೂಕು ಕಚೇರಿಯಿಂದ ಮಹಿಳೆಯರು ವಂಶವೃಕ್ಷ ಪಡೆಯಲು ಅರ್ಜಿ ಸಲ್ಲಿಸಿದರೆ ನಿರಾಕರಿಸುತ್ತಿದ್ದಾರೆ. ತಾಲ್ಲೂಕು ಕಚೇರಿಯಿಂದ ಯಾವುದೇ ರೀತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಅರ್ಜಿಸಲ್ಲಿಸುವ ಸಮಾನ ಹಕ್ಕು ಮಹಿಳೆಯರಿಗು ಇದೆ. ಆಡಳಿತದ ಮುಖ್ಯ ಸ್ಥಾನಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದರೆ ಮಹಿಳೆಯರು ಸೇರಿದಂತೆ ಬಡವರಿಗೆ ನ್ಯಾಯ ದೊರೆಯುತ್ತದೆ ಎನ್ನುವ ನಂಭಿಕೆ ಇದೆ. ಆದರೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಮಹಿಳೆಯರೆ ಇದ್ದರು ಸಹ ಆಡಳಿತ ಸಂಪೂರ್ಣವಾಗಿ ಕುಸಿತವಾಗಿದೆ. ಅಧಿಕಾರಿಗಳನ್ನು ಸಾರ್ವಜನಿಕರು ಭೇಟಿ ಮಾಡುವ ಸಮಯದಲ್ಲು ಸಹ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯ ಇರುವುದೇ ಇಲ್ಲ. ಮುಖ್ಯ ಅಧಿಕಾರಿಗಳೆ ಕಚೇರಿಯಲ್ಲಿ ಇಲ್ಲದ ಮೇಲೆ ಇತರೆ ಸಿಬ್ಬಂದಿಯು ಕಚೇರಿಯಲ್ಲಿ ಸಾರ್ವಜನಿಕರ ಕೈಗೆ ಸಿಗುವುದೇ ಅಪರೂಪವಾಗಿದೆ ಎಂದು ದೂರಿದರು.

ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡ ಸಿ.ಎಚ್.ರಾಮಕೃಷ್ಣ ಮಾತನಾಡಿ, ನಾಡಕಚೇರಿಗಳ ವಿದ್ಯುತ್ ಬಿಲ್ ಪಾವತಿ ಮಾಡದೇ ಇರುವುದರಿಂದ ಬೆಸ್ಕಾಂ ವಿದ್ಯುತ್ ಸರಬರಾಜು ನಿಲ್ಲಿಸಿದೆ. ಶನಿವಾರದಿಂದಲು ನಾಡ ಕಚೇರಿಗಳಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಎಲ್ಲಾ ಅಗತ್ಯ ದಾಖಲೆಗಳು ಇದ್ದರು ಸಹ ಪೌತಿ ಖಾತೆಗಳಿಗೆ ಅರ್ಜಿ ಸಲ್ಲಿಸಲು ಗ್ರಾಮಲೆಕ್ಕಾಧಿಕಾರಿಗಳಿಂದ ಸಹಿ ಪಡೆಯಬೇಕು ಎನ್ನುವ ನಿಯಮ ಅವೈಜ್ಞಾನಿಕವಾಗಿದೆ. ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಆನ್ಲೈನ್ ಮಾಡಲಾಗಿದೆ. ಆದರೆ, ತಾಂತ್ರಿಕ ತೊಂದರೆಗಳನ್ನು ನಿವಾರಣೆ ಮಾಡುವ ಸೂಕ್ತ ಸಿಬ್ಬಂದಿ ಇಲ್ಲದೆ ಆನ್ಲೈನ್ ಸೇವೆಗಳಿಗೆ ಸಾರ್ವಜನಿಕರು ಬೇಸತ್ತು ಹೋಗುವಂತಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ವಿಷಕಂಠ, ಸಿಪಿಐಎಂ ಮುಖಂಡರಾದ ಪಿ.ಎ.ವೆಂಕಟೇಶ್, ಮಂಜುನಾಥ್,ಪ್ರಜಾ ವಿಮೋಚನ ಸಮಿತಿ ಮುಖಂಡ ಗೂಳ್ಯಹನುಮಣ್ಣ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago