ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ಆರೋಪ: ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಇಂದು(ಡಿ.4) ಎಸಿ ಕಚೇರಿ ಮುಂದೆ ಸಿಪಿಐಎಂ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಸರಿಪಡಿಸುವಂತೆ ಹಾಗೂ ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಡಿ.4ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ ಹೇಳಿದರು.

ಮಂಗಳವಾರ ನಗರದ ಸಿಪಿಐಎಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಉಳ್ಳವರಿಗಷ್ಟೇ ಸೀಮಿತವಾಗಿದೆ. ಬಡ ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನಮ್ಮ ಬೇಡಿಕೆಗಳಿಗೆ ಸೂಕ್ತ ಉತ್ತರ ನೀಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಬಗರ್ ಹುಕ್ಕಂ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಆಯಾ ಹೋಬಳಿಗಳ ನಾಡಕಚೇರಿಗಳಲ್ಲಿ ಪ್ರಕಟಿಸಬೇಕು. ಸರ್ಕಾರಿ ಸ್ವತ್ತುಗಳು ಉಳ್ಳವರ ಪಾಲಾಗುತ್ತಿವೆ ಇವುಗಳ ರಕ್ಷಣೆಗೆ ತಾಲ್ಲೂಕು ಆಡಳಿತ ಮುಂದಾಗುತ್ತಿಲ್ಲ. ನಗರದ ತಾಲ್ಲೂಕು ಕಚೇರಿ ಆವರಣ ಕಸದ ತಿಪ್ಪೆಯಂತಾಗಿದ್ದರು ಸ್ವಚ್ಛತೆ ಕಡೆಗೆ ಯಾವುದೇ ಗಮನವನ್ನು ನೀಡುತ್ತಿಲ್ಲ. ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದಾಗಿವೆ ಎಂದು ದೂರಿದರು.

ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ ಮಾತನಾಡಿ, ತಹಶೀಲ್ದಾರ್,ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಭೂ ವ್ಯಾಜ್ಯ ಸೇರಿದಂತೆ ಇತರೆ ಪ್ರಕರಣಗಳ ವಿಚಾರಣೆ ಮುಗಿದು ಆದೇಶಕ್ಕೆ ಕಾಯ್ದಿರಿಸಿದ ನಂತರ ಆದೇಶ ಪ್ರಕಟಿಸಲು ದಿನಾಂಕ ನಿಗದಿಯಾಗಬೇಕು. ಆದೇಶದ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಗುಮಾಸ್ತರ ಬಳಿಗೆ ಅಲೆದಾಡುವ ಪ್ರರಿಸ್ಥಿತಿಯನ್ನು ತಪ್ಪಿಸಬೇಕು ಎಂದರು.

ಸಿಪಿಐಎಂ ರಾಜ್ಯ ಮುಖಂಡರಾದ ಬೆಳವಂಗಲಪ್ರಭಾ ಮಾತನಾಡಿ, ತಾಲ್ಲೂಕು ಕಚೇರಿಯಿಂದ ಮಹಿಳೆಯರು ವಂಶವೃಕ್ಷ ಪಡೆಯಲು ಅರ್ಜಿ ಸಲ್ಲಿಸಿದರೆ ನಿರಾಕರಿಸುತ್ತಿದ್ದಾರೆ. ತಾಲ್ಲೂಕು ಕಚೇರಿಯಿಂದ ಯಾವುದೇ ರೀತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಅರ್ಜಿಸಲ್ಲಿಸುವ ಸಮಾನ ಹಕ್ಕು ಮಹಿಳೆಯರಿಗು ಇದೆ. ಆಡಳಿತದ ಮುಖ್ಯ ಸ್ಥಾನಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದರೆ ಮಹಿಳೆಯರು ಸೇರಿದಂತೆ ಬಡವರಿಗೆ ನ್ಯಾಯ ದೊರೆಯುತ್ತದೆ ಎನ್ನುವ ನಂಭಿಕೆ ಇದೆ. ಆದರೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಮಹಿಳೆಯರೆ ಇದ್ದರು ಸಹ ಆಡಳಿತ ಸಂಪೂರ್ಣವಾಗಿ ಕುಸಿತವಾಗಿದೆ. ಅಧಿಕಾರಿಗಳನ್ನು ಸಾರ್ವಜನಿಕರು ಭೇಟಿ ಮಾಡುವ ಸಮಯದಲ್ಲು ಸಹ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯ ಇರುವುದೇ ಇಲ್ಲ. ಮುಖ್ಯ ಅಧಿಕಾರಿಗಳೆ ಕಚೇರಿಯಲ್ಲಿ ಇಲ್ಲದ ಮೇಲೆ ಇತರೆ ಸಿಬ್ಬಂದಿಯು ಕಚೇರಿಯಲ್ಲಿ ಸಾರ್ವಜನಿಕರ ಕೈಗೆ ಸಿಗುವುದೇ ಅಪರೂಪವಾಗಿದೆ ಎಂದು ದೂರಿದರು.

ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡ ಸಿ.ಎಚ್.ರಾಮಕೃಷ್ಣ ಮಾತನಾಡಿ, ನಾಡಕಚೇರಿಗಳ ವಿದ್ಯುತ್ ಬಿಲ್ ಪಾವತಿ ಮಾಡದೇ ಇರುವುದರಿಂದ ಬೆಸ್ಕಾಂ ವಿದ್ಯುತ್ ಸರಬರಾಜು ನಿಲ್ಲಿಸಿದೆ. ಶನಿವಾರದಿಂದಲು ನಾಡ ಕಚೇರಿಗಳಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಎಲ್ಲಾ ಅಗತ್ಯ ದಾಖಲೆಗಳು ಇದ್ದರು ಸಹ ಪೌತಿ ಖಾತೆಗಳಿಗೆ ಅರ್ಜಿ ಸಲ್ಲಿಸಲು ಗ್ರಾಮಲೆಕ್ಕಾಧಿಕಾರಿಗಳಿಂದ ಸಹಿ ಪಡೆಯಬೇಕು ಎನ್ನುವ ನಿಯಮ ಅವೈಜ್ಞಾನಿಕವಾಗಿದೆ. ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಆನ್ಲೈನ್ ಮಾಡಲಾಗಿದೆ. ಆದರೆ, ತಾಂತ್ರಿಕ ತೊಂದರೆಗಳನ್ನು ನಿವಾರಣೆ ಮಾಡುವ ಸೂಕ್ತ ಸಿಬ್ಬಂದಿ ಇಲ್ಲದೆ ಆನ್ಲೈನ್ ಸೇವೆಗಳಿಗೆ ಸಾರ್ವಜನಿಕರು ಬೇಸತ್ತು ಹೋಗುವಂತಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ವಿಷಕಂಠ, ಸಿಪಿಐಎಂ ಮುಖಂಡರಾದ ಪಿ.ಎ.ವೆಂಕಟೇಶ್, ಮಂಜುನಾಥ್,ಪ್ರಜಾ ವಿಮೋಚನ ಸಮಿತಿ ಮುಖಂಡ ಗೂಳ್ಯಹನುಮಣ್ಣ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

11 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

12 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

18 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago