ದೊಡ್ಡಬಳ್ಳಾಪುರ: ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಸರಿಪಡಿಸುವಂತೆ ಹಾಗೂ ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಡಿ.4ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ ಹೇಳಿದರು.
ಮಂಗಳವಾರ ನಗರದ ಸಿಪಿಐಎಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಉಳ್ಳವರಿಗಷ್ಟೇ ಸೀಮಿತವಾಗಿದೆ. ಬಡ ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನಮ್ಮ ಬೇಡಿಕೆಗಳಿಗೆ ಸೂಕ್ತ ಉತ್ತರ ನೀಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಬಗರ್ ಹುಕ್ಕಂ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಆಯಾ ಹೋಬಳಿಗಳ ನಾಡಕಚೇರಿಗಳಲ್ಲಿ ಪ್ರಕಟಿಸಬೇಕು. ಸರ್ಕಾರಿ ಸ್ವತ್ತುಗಳು ಉಳ್ಳವರ ಪಾಲಾಗುತ್ತಿವೆ ಇವುಗಳ ರಕ್ಷಣೆಗೆ ತಾಲ್ಲೂಕು ಆಡಳಿತ ಮುಂದಾಗುತ್ತಿಲ್ಲ. ನಗರದ ತಾಲ್ಲೂಕು ಕಚೇರಿ ಆವರಣ ಕಸದ ತಿಪ್ಪೆಯಂತಾಗಿದ್ದರು ಸ್ವಚ್ಛತೆ ಕಡೆಗೆ ಯಾವುದೇ ಗಮನವನ್ನು ನೀಡುತ್ತಿಲ್ಲ. ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದಾಗಿವೆ ಎಂದು ದೂರಿದರು.
ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ ಮಾತನಾಡಿ, ತಹಶೀಲ್ದಾರ್,ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಭೂ ವ್ಯಾಜ್ಯ ಸೇರಿದಂತೆ ಇತರೆ ಪ್ರಕರಣಗಳ ವಿಚಾರಣೆ ಮುಗಿದು ಆದೇಶಕ್ಕೆ ಕಾಯ್ದಿರಿಸಿದ ನಂತರ ಆದೇಶ ಪ್ರಕಟಿಸಲು ದಿನಾಂಕ ನಿಗದಿಯಾಗಬೇಕು. ಆದೇಶದ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಗುಮಾಸ್ತರ ಬಳಿಗೆ ಅಲೆದಾಡುವ ಪ್ರರಿಸ್ಥಿತಿಯನ್ನು ತಪ್ಪಿಸಬೇಕು ಎಂದರು.
ಸಿಪಿಐಎಂ ರಾಜ್ಯ ಮುಖಂಡರಾದ ಬೆಳವಂಗಲಪ್ರಭಾ ಮಾತನಾಡಿ, ತಾಲ್ಲೂಕು ಕಚೇರಿಯಿಂದ ಮಹಿಳೆಯರು ವಂಶವೃಕ್ಷ ಪಡೆಯಲು ಅರ್ಜಿ ಸಲ್ಲಿಸಿದರೆ ನಿರಾಕರಿಸುತ್ತಿದ್ದಾರೆ. ತಾಲ್ಲೂಕು ಕಚೇರಿಯಿಂದ ಯಾವುದೇ ರೀತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಅರ್ಜಿಸಲ್ಲಿಸುವ ಸಮಾನ ಹಕ್ಕು ಮಹಿಳೆಯರಿಗು ಇದೆ. ಆಡಳಿತದ ಮುಖ್ಯ ಸ್ಥಾನಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದರೆ ಮಹಿಳೆಯರು ಸೇರಿದಂತೆ ಬಡವರಿಗೆ ನ್ಯಾಯ ದೊರೆಯುತ್ತದೆ ಎನ್ನುವ ನಂಭಿಕೆ ಇದೆ. ಆದರೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಮಹಿಳೆಯರೆ ಇದ್ದರು ಸಹ ಆಡಳಿತ ಸಂಪೂರ್ಣವಾಗಿ ಕುಸಿತವಾಗಿದೆ. ಅಧಿಕಾರಿಗಳನ್ನು ಸಾರ್ವಜನಿಕರು ಭೇಟಿ ಮಾಡುವ ಸಮಯದಲ್ಲು ಸಹ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯ ಇರುವುದೇ ಇಲ್ಲ. ಮುಖ್ಯ ಅಧಿಕಾರಿಗಳೆ ಕಚೇರಿಯಲ್ಲಿ ಇಲ್ಲದ ಮೇಲೆ ಇತರೆ ಸಿಬ್ಬಂದಿಯು ಕಚೇರಿಯಲ್ಲಿ ಸಾರ್ವಜನಿಕರ ಕೈಗೆ ಸಿಗುವುದೇ ಅಪರೂಪವಾಗಿದೆ ಎಂದು ದೂರಿದರು.
ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡ ಸಿ.ಎಚ್.ರಾಮಕೃಷ್ಣ ಮಾತನಾಡಿ, ನಾಡಕಚೇರಿಗಳ ವಿದ್ಯುತ್ ಬಿಲ್ ಪಾವತಿ ಮಾಡದೇ ಇರುವುದರಿಂದ ಬೆಸ್ಕಾಂ ವಿದ್ಯುತ್ ಸರಬರಾಜು ನಿಲ್ಲಿಸಿದೆ. ಶನಿವಾರದಿಂದಲು ನಾಡ ಕಚೇರಿಗಳಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಎಲ್ಲಾ ಅಗತ್ಯ ದಾಖಲೆಗಳು ಇದ್ದರು ಸಹ ಪೌತಿ ಖಾತೆಗಳಿಗೆ ಅರ್ಜಿ ಸಲ್ಲಿಸಲು ಗ್ರಾಮಲೆಕ್ಕಾಧಿಕಾರಿಗಳಿಂದ ಸಹಿ ಪಡೆಯಬೇಕು ಎನ್ನುವ ನಿಯಮ ಅವೈಜ್ಞಾನಿಕವಾಗಿದೆ. ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಆನ್ಲೈನ್ ಮಾಡಲಾಗಿದೆ. ಆದರೆ, ತಾಂತ್ರಿಕ ತೊಂದರೆಗಳನ್ನು ನಿವಾರಣೆ ಮಾಡುವ ಸೂಕ್ತ ಸಿಬ್ಬಂದಿ ಇಲ್ಲದೆ ಆನ್ಲೈನ್ ಸೇವೆಗಳಿಗೆ ಸಾರ್ವಜನಿಕರು ಬೇಸತ್ತು ಹೋಗುವಂತಾಗಿದೆ ಎಂದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…