ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ಆರೋಪ: ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಇಂದು(ಡಿ.4) ಎಸಿ ಕಚೇರಿ ಮುಂದೆ ಸಿಪಿಐಎಂ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಸರಿಪಡಿಸುವಂತೆ ಹಾಗೂ ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಡಿ.4ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ ಹೇಳಿದರು.

ಮಂಗಳವಾರ ನಗರದ ಸಿಪಿಐಎಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಉಳ್ಳವರಿಗಷ್ಟೇ ಸೀಮಿತವಾಗಿದೆ. ಬಡ ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನಮ್ಮ ಬೇಡಿಕೆಗಳಿಗೆ ಸೂಕ್ತ ಉತ್ತರ ನೀಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಬಗರ್ ಹುಕ್ಕಂ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಆಯಾ ಹೋಬಳಿಗಳ ನಾಡಕಚೇರಿಗಳಲ್ಲಿ ಪ್ರಕಟಿಸಬೇಕು. ಸರ್ಕಾರಿ ಸ್ವತ್ತುಗಳು ಉಳ್ಳವರ ಪಾಲಾಗುತ್ತಿವೆ ಇವುಗಳ ರಕ್ಷಣೆಗೆ ತಾಲ್ಲೂಕು ಆಡಳಿತ ಮುಂದಾಗುತ್ತಿಲ್ಲ. ನಗರದ ತಾಲ್ಲೂಕು ಕಚೇರಿ ಆವರಣ ಕಸದ ತಿಪ್ಪೆಯಂತಾಗಿದ್ದರು ಸ್ವಚ್ಛತೆ ಕಡೆಗೆ ಯಾವುದೇ ಗಮನವನ್ನು ನೀಡುತ್ತಿಲ್ಲ. ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದಾಗಿವೆ ಎಂದು ದೂರಿದರು.

ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ ಮಾತನಾಡಿ, ತಹಶೀಲ್ದಾರ್,ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಭೂ ವ್ಯಾಜ್ಯ ಸೇರಿದಂತೆ ಇತರೆ ಪ್ರಕರಣಗಳ ವಿಚಾರಣೆ ಮುಗಿದು ಆದೇಶಕ್ಕೆ ಕಾಯ್ದಿರಿಸಿದ ನಂತರ ಆದೇಶ ಪ್ರಕಟಿಸಲು ದಿನಾಂಕ ನಿಗದಿಯಾಗಬೇಕು. ಆದೇಶದ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಗುಮಾಸ್ತರ ಬಳಿಗೆ ಅಲೆದಾಡುವ ಪ್ರರಿಸ್ಥಿತಿಯನ್ನು ತಪ್ಪಿಸಬೇಕು ಎಂದರು.

ಸಿಪಿಐಎಂ ರಾಜ್ಯ ಮುಖಂಡರಾದ ಬೆಳವಂಗಲಪ್ರಭಾ ಮಾತನಾಡಿ, ತಾಲ್ಲೂಕು ಕಚೇರಿಯಿಂದ ಮಹಿಳೆಯರು ವಂಶವೃಕ್ಷ ಪಡೆಯಲು ಅರ್ಜಿ ಸಲ್ಲಿಸಿದರೆ ನಿರಾಕರಿಸುತ್ತಿದ್ದಾರೆ. ತಾಲ್ಲೂಕು ಕಚೇರಿಯಿಂದ ಯಾವುದೇ ರೀತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಅರ್ಜಿಸಲ್ಲಿಸುವ ಸಮಾನ ಹಕ್ಕು ಮಹಿಳೆಯರಿಗು ಇದೆ. ಆಡಳಿತದ ಮುಖ್ಯ ಸ್ಥಾನಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದರೆ ಮಹಿಳೆಯರು ಸೇರಿದಂತೆ ಬಡವರಿಗೆ ನ್ಯಾಯ ದೊರೆಯುತ್ತದೆ ಎನ್ನುವ ನಂಭಿಕೆ ಇದೆ. ಆದರೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಮಹಿಳೆಯರೆ ಇದ್ದರು ಸಹ ಆಡಳಿತ ಸಂಪೂರ್ಣವಾಗಿ ಕುಸಿತವಾಗಿದೆ. ಅಧಿಕಾರಿಗಳನ್ನು ಸಾರ್ವಜನಿಕರು ಭೇಟಿ ಮಾಡುವ ಸಮಯದಲ್ಲು ಸಹ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯ ಇರುವುದೇ ಇಲ್ಲ. ಮುಖ್ಯ ಅಧಿಕಾರಿಗಳೆ ಕಚೇರಿಯಲ್ಲಿ ಇಲ್ಲದ ಮೇಲೆ ಇತರೆ ಸಿಬ್ಬಂದಿಯು ಕಚೇರಿಯಲ್ಲಿ ಸಾರ್ವಜನಿಕರ ಕೈಗೆ ಸಿಗುವುದೇ ಅಪರೂಪವಾಗಿದೆ ಎಂದು ದೂರಿದರು.

ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡ ಸಿ.ಎಚ್.ರಾಮಕೃಷ್ಣ ಮಾತನಾಡಿ, ನಾಡಕಚೇರಿಗಳ ವಿದ್ಯುತ್ ಬಿಲ್ ಪಾವತಿ ಮಾಡದೇ ಇರುವುದರಿಂದ ಬೆಸ್ಕಾಂ ವಿದ್ಯುತ್ ಸರಬರಾಜು ನಿಲ್ಲಿಸಿದೆ. ಶನಿವಾರದಿಂದಲು ನಾಡ ಕಚೇರಿಗಳಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಎಲ್ಲಾ ಅಗತ್ಯ ದಾಖಲೆಗಳು ಇದ್ದರು ಸಹ ಪೌತಿ ಖಾತೆಗಳಿಗೆ ಅರ್ಜಿ ಸಲ್ಲಿಸಲು ಗ್ರಾಮಲೆಕ್ಕಾಧಿಕಾರಿಗಳಿಂದ ಸಹಿ ಪಡೆಯಬೇಕು ಎನ್ನುವ ನಿಯಮ ಅವೈಜ್ಞಾನಿಕವಾಗಿದೆ. ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಆನ್ಲೈನ್ ಮಾಡಲಾಗಿದೆ. ಆದರೆ, ತಾಂತ್ರಿಕ ತೊಂದರೆಗಳನ್ನು ನಿವಾರಣೆ ಮಾಡುವ ಸೂಕ್ತ ಸಿಬ್ಬಂದಿ ಇಲ್ಲದೆ ಆನ್ಲೈನ್ ಸೇವೆಗಳಿಗೆ ಸಾರ್ವಜನಿಕರು ಬೇಸತ್ತು ಹೋಗುವಂತಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ವಿಷಕಂಠ, ಸಿಪಿಐಎಂ ಮುಖಂಡರಾದ ಪಿ.ಎ.ವೆಂಕಟೇಶ್, ಮಂಜುನಾಥ್,ಪ್ರಜಾ ವಿಮೋಚನ ಸಮಿತಿ ಮುಖಂಡ ಗೂಳ್ಯಹನುಮಣ್ಣ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

19 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago