Categories: ಕೋಲಾರ

ತಾಲೂಕು ಪಂಚಾಯತಿಗಳಲ್ಲಿನ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಡಿ.10 ಫ್ರೀಡಂ ಪಾರ್ಕ್ ನಲ್ಲಿ ಧರಣಿ

ಕೋಲಾರ: ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕು ಪಂಚಾಯತಿಗಳು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನಡೆದಿರುವ ದಲಿತರ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ಡಿ.10 ರಂದು ಕರ್ನಾಟಕ ರಿಪಬ್ಲಿಕನ್ ಸಂಘಟನೆ ಹಾಗೂ ಪ್ರಜಾ ವಿಮೋಚನಾ ಚಳುವಳಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾಕಷ್ಟು ಹಣ ಬಿಡುಗಡೆ ಮಾಡಿದರೂ ನಮ್ಮಲ್ಲಿನ ಅಧಿಕಾರಿಗಳು ಅ ಹಣವನ್ನು ದೋಚಿ ದಲಿತ ಸಮುದಾಯಕ್ಕೆ ಮೋಸ ಮಾಡಿದ್ದು ಅಲ್ಲದೆ ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಇದರ ವಿರುದ್ದವಾಗಿ ನಮ್ಮ ಹೋರಾಟವು ನಿರಂತರವಾಗಿ ಮುಂದುವರೆಯಲಿದೆ ಎಂದರು.

ಜಿಲ್ಲೆಯ ಬಂಗಾರಪೇಟೆ ತಾಲೂಕು ಪಂಚಾಯತಿ ಇಒ ರವಿಕುಮಾರ್ ಆದಾಯಕ್ಕಿಂತ ಹೆಚ್ಚಿನ ಹಣ ಗಳಿಸಿದ್ದಾರೆ ಇದರ ಬಗ್ಗೆ ದಾಖಲೆಗಳ ಸಮೇತವಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಬೇತಮಂಗಲ, ಘಟ್ಟಕಾಮದೇನಹಳ್ಳಿ, ಎನ್ ಜಿ ಹಲ್ಕೂರು ಗ್ರಾಮ ಪಂಚಾಯಿತಿಗಳಲ್ಲಿ ಇ ಸ್ವತ್ತು ಮಾಡಿಸಲು ಹಣ ನಿಗದಿ ಮಾಡಿದ್ದಾರೆ ಎಂದು ಆರೋಪಿಸಿದರು.

ಕೋಲಾರ ಜಿಲ್ಲೆಯಲ್ಲಿ ಭ್ರಷ್ಟಾಚಾರಕ್ಕೆ ಜಿಲ್ಲಾಧಿಕಾರಿಯು ಬೆಂಬಲವಾಗಿ ನಿಂತಿದ್ದಾರೆ ಎಂಬುದು ಅನುಮಾನ ಮೂಡುತ್ತದೆ ಕೆಲವು ಅಧಿಕಾರಿಗಳ ವಿರುದ್ದ ದಾಖಲೆಗಳ ಸಮೇತವಾಗಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ 15 ನೇ ಹಣಕಾಸು ಯೋಜನೆಯಲ್ಲಿ ಕಾಮಗಾರಿಗಳ ಹೆಸರಿನಲ್ಲೂ ಹಣ ದುರುಪಯೋಗವಾಗಿದೆ ಇದರ ವಿರುದ್ದ ಕ್ರಮ ವಹಿಸುವಂತೆ ರಾಜ್ಯಾದ್ಯಂತ ವಿವಿಧ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಲಿದ್ದು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಪ್ರಜಾ ವಿಮೋಚನಾ ಚಳುವಳಿಯ ಜಿಲ್ಲಾಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಮುಂತಾದವರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago