ಕೋಲಾರ: ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕು ಪಂಚಾಯತಿಗಳು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನಡೆದಿರುವ ದಲಿತರ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ಡಿ.10 ರಂದು ಕರ್ನಾಟಕ ರಿಪಬ್ಲಿಕನ್ ಸಂಘಟನೆ ಹಾಗೂ ಪ್ರಜಾ ವಿಮೋಚನಾ ಚಳುವಳಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾಕಷ್ಟು ಹಣ ಬಿಡುಗಡೆ ಮಾಡಿದರೂ ನಮ್ಮಲ್ಲಿನ ಅಧಿಕಾರಿಗಳು ಅ ಹಣವನ್ನು ದೋಚಿ ದಲಿತ ಸಮುದಾಯಕ್ಕೆ ಮೋಸ ಮಾಡಿದ್ದು ಅಲ್ಲದೆ ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಇದರ ವಿರುದ್ದವಾಗಿ ನಮ್ಮ ಹೋರಾಟವು ನಿರಂತರವಾಗಿ ಮುಂದುವರೆಯಲಿದೆ ಎಂದರು.
ಜಿಲ್ಲೆಯ ಬಂಗಾರಪೇಟೆ ತಾಲೂಕು ಪಂಚಾಯತಿ ಇಒ ರವಿಕುಮಾರ್ ಆದಾಯಕ್ಕಿಂತ ಹೆಚ್ಚಿನ ಹಣ ಗಳಿಸಿದ್ದಾರೆ ಇದರ ಬಗ್ಗೆ ದಾಖಲೆಗಳ ಸಮೇತವಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಬೇತಮಂಗಲ, ಘಟ್ಟಕಾಮದೇನಹಳ್ಳಿ, ಎನ್ ಜಿ ಹಲ್ಕೂರು ಗ್ರಾಮ ಪಂಚಾಯಿತಿಗಳಲ್ಲಿ ಇ ಸ್ವತ್ತು ಮಾಡಿಸಲು ಹಣ ನಿಗದಿ ಮಾಡಿದ್ದಾರೆ ಎಂದು ಆರೋಪಿಸಿದರು.
ಕೋಲಾರ ಜಿಲ್ಲೆಯಲ್ಲಿ ಭ್ರಷ್ಟಾಚಾರಕ್ಕೆ ಜಿಲ್ಲಾಧಿಕಾರಿಯು ಬೆಂಬಲವಾಗಿ ನಿಂತಿದ್ದಾರೆ ಎಂಬುದು ಅನುಮಾನ ಮೂಡುತ್ತದೆ ಕೆಲವು ಅಧಿಕಾರಿಗಳ ವಿರುದ್ದ ದಾಖಲೆಗಳ ಸಮೇತವಾಗಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ 15 ನೇ ಹಣಕಾಸು ಯೋಜನೆಯಲ್ಲಿ ಕಾಮಗಾರಿಗಳ ಹೆಸರಿನಲ್ಲೂ ಹಣ ದುರುಪಯೋಗವಾಗಿದೆ ಇದರ ವಿರುದ್ದ ಕ್ರಮ ವಹಿಸುವಂತೆ ರಾಜ್ಯಾದ್ಯಂತ ವಿವಿಧ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಲಿದ್ದು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಜಾ ವಿಮೋಚನಾ ಚಳುವಳಿಯ ಜಿಲ್ಲಾಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಮುಂತಾದವರು ಇದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…