ನಗರದ ಭಗತ್ ಸಿಂಗ್ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ತೂಬಗೆರೆ ಸರ್ಕಾರಿ ಪ್ರೌಢಶಾಲಾ ಮಕ್ಕಳು. ಈ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.
ವಿಶೇಷವೇನೆಂದರೆ ಒಂದುವರೆ ವರ್ಷಗಳಿಂದ ಈ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದಿದ್ದರೂ ಸಹ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಹಕಾರ, ತರಬೇತಿಯಿಂದ ವಿದ್ಯಾರ್ಥಿಗಳು ಕ್ರೀಡಾ ಕೌಶಲ್ಯಗಳನ್ನು ಸರಿಯಾದ ರೀತಿಯಲ್ಲಿ ಅಳವಡಿಸಿಕೊಂಡು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಜಯಗಳಿಸಿದ್ದಾರೆ.
ಪ್ರತಿ ವರ್ಷ ದೈಹಿಕ ಶಿಕ್ಷಕರು ಇದ್ದಂತಹ ಸಮಯದಲ್ಲಿ ತೂಬಗೆರೆ ಪ್ರೌಢಶಾಲೆಯಿಂದ ಒಬ್ಬ ವಿದ್ಯಾರ್ಥಿಯಾದರು ವಿವಿಧ ಕ್ರೀಡಾ ವಿಭಾಗದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈಗ ದೈಹಿಕ ಶಿಕ್ಷಕರು ಇಲ್ಲದಿದ್ದರೂ ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿರುವುದನ್ನು ಕಂಡು ಶಾಲೆಯ ಹಳೆಯ ವಿದ್ಯಾರ್ಥಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮುಖಾಂತರ ಕ್ರೀಡಾ ಪುಟ್ಟುಗಳಿಗೆ ಅಭಿನಂದಿಸಿ ಮುಂದಿನ ಸ್ಪರ್ಧೆಗೆ ಪ್ರೋತ್ಸಾಹಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಗಿರೀಶ್, ಶಿಕ್ಷಕರು ಮತ್ತು ಸಹ ಶಿಕ್ಷಕರಾದ ಎಚ್.ನಾರಾಯಣ್, ಹಳೆಯ ವಿದ್ಯಾರ್ಥಿಗಳಾದ ನರಸಿಂಹರಾಜ, ಗಂಗಾಧರ, ವಿನೋದ್, ಉದಯ ಆರಾಧ್ಯ, ಕಿರಣ್, ಸುನಿಲ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.