ಪದವಿ ಪೂರ್ವ ಶಿಕ್ಷಣ ಇಲಾಖೆ ದೊಡ್ಡಬಳ್ಳಾಪುರ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.
ಈ ಕ್ರೀಡಾಕೂಟವನ್ನು ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿದರು. ವಿವಿಧ ಕ್ರೀಡೆಗಳಲ್ಲಿ ಭಾಗವಿಸಿದ್ದ ಕ್ರೀಡಾ ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಈ ವೇಳೆ ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ರೈತ ಮೋರ್ಚಾ ನಿರ್ದೇಶಕ ಆನಂದ್ ಮೂರ್ತಿ, ಮಾಜಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ್, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷ ನಾಗರಾಜ್ ಬಾಬು, ಕಾಡನರು ಗ್ರಾಮ ಪಂಚಾಯತಿ ಅಧ್ಯಕ್ಷ ಎನ್.ಆರ್.ಮನು, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಮದಗೊಂಡನಹಳ್ಳಿ ಶ್ರೀನಿವಾಸ್. ಮುಖಂಡರಾದ ಅನಿಲ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…