ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಡಾಕ್ಟರ್ ಆಂಜನಪ್ಪ, ವರಲಕ್ಷ್ಮಿ ಪಿಎಸ್ಐ ದೊಡ್ಡಬೆಳವಂಗಲ, ಉಮಾರಬ್ಬ ನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ
ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಕುರಿತು ಮಾತನಾಡಿದ ಡಾಕ್ಟರ್ ಆಂಜನಪ್ಪ, ಇತ್ತಿಚಿನ ದಿನಗಳಲ್ಲಿ ಥೈರಾಯ್ಡ್ ಹಾರ್ಮೋನ್ ಸಮಸ್ಯೆ ಹೆಚ್ಚಾಗುತ್ತಿದ್ದು, ಹದಿಹರೆಯದ ವಯಸ್ಸಿನಲ್ಲಿ ಥೈರಾಯ್ಡ್ ಗ್ರಂಥಿ ಸಮಸ್ಯೆ ಬರುತ್ತಿದೆ. ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.
ಕಿಡ್ನಿ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದರು.
ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗುವುದು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ನಮ್ಮ ಆಹಾರ ಪದ್ಧತಿ ಹಾಗೂ ಜೀವನ ಶೈಲಿ ಕಾರಣ ಎಂದು ತಿಳಿಸಿದರು.
ಮಹಿಳೆಯರಲ್ಲಿ ಅತೀ ಹೆಚ್ಚು ಕಂಡುಬರುತ್ತಿರುವ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡುತ್ತಾ ಇತ್ತಿಚಿನ ದಿನಗಳಲ್ಲಿ ಅಹಾರ ಪದ್ಧತಿಯಿಂದ ಗರ್ಭಕೋಶದ ಸಮಸ್ಯೆ ಬರುತ್ತಿದೆ. ಇದರಿಂದ ಮರಣದ ಸಂಖ್ಯೆ ಹೆಚ್ಚುತ್ತಿದೆ. ಇದರ ಬಗ್ಗೆ ಗಮನಹರಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.
ಪಿಎಸ್ಐ ವರಲಕ್ಷ್ಮಿ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಖಿನ್ನತೆಯಿಂದ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವವರು ಹೆಚ್ಚಾಗಿದೆ. ಇದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ.
ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರ ಸಕಾಲದಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದ್ದಲ್ಲಿ ಮುಂದೆ ಉತ್ತಮ ನಾಗರಿಕರಾಗುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ,
ಮಹಿಳೆಯರಿಗೆ ಆತ್ಮವಿಶ್ವಾಸ ಮೂಡಿಸಲು ಜ್ಞಾನವಿಕಾಸದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರಿಗೆ, ಕಾನೂನು, ಆರೋಗ್ಯದ ಬಗ್ಗೆ ಪ್ರತಿ ತಿಂಗಳು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್, ಒಕ್ಕೂಟದ ಅಧ್ಯಕ್ಷರಾದ ವಸಂತಾ,
ಸಮನ್ವಾಯಾದಿಕಾರಿ ಛಾಯಾಕುಮಾರಿ, ಕೃಷಿ ಮೇಲ್ವಿಚಾರಕ ಲೋಹಿತ್ ಗೌಡ, ವಲಯ ಮೇಲ್ವಿಚಾರಕ ಗಿರಿಜ, ರೇಣುಕಾಪ್ರಸಾದ್ ಹಾಗೂ ಸಂಘದ ಸೇವಾಪ್ರತಿನಿಧಿಗಳು, VLE ಸೇವಾದಾರರು, ಸಂಘದ ಸದಸ್ಯರು ಹಾಜರಿದ್ದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…