ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಡಾಕ್ಟರ್ ಆಂಜನಪ್ಪ, ವರಲಕ್ಷ್ಮಿ ಪಿಎಸ್ಐ ದೊಡ್ಡಬೆಳವಂಗಲ, ಉಮಾರಬ್ಬ ನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ
ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಕುರಿತು ಮಾತನಾಡಿದ ಡಾಕ್ಟರ್ ಆಂಜನಪ್ಪ, ಇತ್ತಿಚಿನ ದಿನಗಳಲ್ಲಿ ಥೈರಾಯ್ಡ್ ಹಾರ್ಮೋನ್ ಸಮಸ್ಯೆ ಹೆಚ್ಚಾಗುತ್ತಿದ್ದು, ಹದಿಹರೆಯದ ವಯಸ್ಸಿನಲ್ಲಿ ಥೈರಾಯ್ಡ್ ಗ್ರಂಥಿ ಸಮಸ್ಯೆ ಬರುತ್ತಿದೆ. ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.

ಕಿಡ್ನಿ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದರು.
ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗುವುದು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ನಮ್ಮ ಆಹಾರ ಪದ್ಧತಿ ಹಾಗೂ ಜೀವನ ಶೈಲಿ ಕಾರಣ ಎಂದು ತಿಳಿಸಿದರು.

ಮಹಿಳೆಯರಲ್ಲಿ ಅತೀ ಹೆಚ್ಚು ಕಂಡುಬರುತ್ತಿರುವ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡುತ್ತಾ ಇತ್ತಿಚಿನ ದಿನಗಳಲ್ಲಿ ಅಹಾರ ಪದ್ಧತಿಯಿಂದ ಗರ್ಭಕೋಶದ ಸಮಸ್ಯೆ ಬರುತ್ತಿದೆ. ಇದರಿಂದ ಮರಣದ ಸಂಖ್ಯೆ ಹೆಚ್ಚುತ್ತಿದೆ. ಇದರ ಬಗ್ಗೆ ಗಮನಹರಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.

ಪಿಎಸ್ಐ ವರಲಕ್ಷ್ಮಿ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಖಿನ್ನತೆಯಿಂದ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವವರು ಹೆಚ್ಚಾಗಿದೆ. ಇದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ.
ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರ ಸಕಾಲದಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದ್ದಲ್ಲಿ ಮುಂದೆ ಉತ್ತಮ ನಾಗರಿಕರಾಗುತ್ತಾರೆ ಎಂದು ತಿಳಿಸಿದರು.

ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ,
ಮಹಿಳೆಯರಿಗೆ ಆತ್ಮವಿಶ್ವಾಸ ಮೂಡಿಸಲು ಜ್ಞಾನವಿಕಾಸದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರಿಗೆ, ಕಾನೂನು, ಆರೋಗ್ಯದ ಬಗ್ಗೆ ಪ್ರತಿ ತಿಂಗಳು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್, ಒಕ್ಕೂಟದ ಅಧ್ಯಕ್ಷರಾದ ವಸಂತಾ,
ಸಮನ್ವಾಯಾದಿಕಾರಿ ಛಾಯಾಕುಮಾರಿ, ಕೃಷಿ ಮೇಲ್ವಿಚಾರಕ ಲೋಹಿತ್ ಗೌಡ, ವಲಯ ಮೇಲ್ವಿಚಾರಕ ಗಿರಿಜ, ರೇಣುಕಾಪ್ರಸಾದ್ ಹಾಗೂ ಸಂಘದ ಸೇವಾಪ್ರತಿನಿಧಿಗಳು, VLE ಸೇವಾದಾರರು, ಸಂಘದ ಸದಸ್ಯರು ಹಾಜರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

3 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

4 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

4 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

4 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

8 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

11 hours ago