ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಡಾಕ್ಟರ್ ಆಂಜನಪ್ಪ, ವರಲಕ್ಷ್ಮಿ ಪಿಎಸ್ಐ ದೊಡ್ಡಬೆಳವಂಗಲ, ಉಮಾರಬ್ಬ ನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ
ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಕುರಿತು ಮಾತನಾಡಿದ ಡಾಕ್ಟರ್ ಆಂಜನಪ್ಪ, ಇತ್ತಿಚಿನ ದಿನಗಳಲ್ಲಿ ಥೈರಾಯ್ಡ್ ಹಾರ್ಮೋನ್ ಸಮಸ್ಯೆ ಹೆಚ್ಚಾಗುತ್ತಿದ್ದು, ಹದಿಹರೆಯದ ವಯಸ್ಸಿನಲ್ಲಿ ಥೈರಾಯ್ಡ್ ಗ್ರಂಥಿ ಸಮಸ್ಯೆ ಬರುತ್ತಿದೆ. ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.
ಕಿಡ್ನಿ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದರು.
ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗುವುದು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ನಮ್ಮ ಆಹಾರ ಪದ್ಧತಿ ಹಾಗೂ ಜೀವನ ಶೈಲಿ ಕಾರಣ ಎಂದು ತಿಳಿಸಿದರು.
ಮಹಿಳೆಯರಲ್ಲಿ ಅತೀ ಹೆಚ್ಚು ಕಂಡುಬರುತ್ತಿರುವ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡುತ್ತಾ ಇತ್ತಿಚಿನ ದಿನಗಳಲ್ಲಿ ಅಹಾರ ಪದ್ಧತಿಯಿಂದ ಗರ್ಭಕೋಶದ ಸಮಸ್ಯೆ ಬರುತ್ತಿದೆ. ಇದರಿಂದ ಮರಣದ ಸಂಖ್ಯೆ ಹೆಚ್ಚುತ್ತಿದೆ. ಇದರ ಬಗ್ಗೆ ಗಮನಹರಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.
ಪಿಎಸ್ಐ ವರಲಕ್ಷ್ಮಿ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಖಿನ್ನತೆಯಿಂದ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವವರು ಹೆಚ್ಚಾಗಿದೆ. ಇದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ.
ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರ ಸಕಾಲದಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದ್ದಲ್ಲಿ ಮುಂದೆ ಉತ್ತಮ ನಾಗರಿಕರಾಗುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ,
ಮಹಿಳೆಯರಿಗೆ ಆತ್ಮವಿಶ್ವಾಸ ಮೂಡಿಸಲು ಜ್ಞಾನವಿಕಾಸದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರಿಗೆ, ಕಾನೂನು, ಆರೋಗ್ಯದ ಬಗ್ಗೆ ಪ್ರತಿ ತಿಂಗಳು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್, ಒಕ್ಕೂಟದ ಅಧ್ಯಕ್ಷರಾದ ವಸಂತಾ,
ಸಮನ್ವಾಯಾದಿಕಾರಿ ಛಾಯಾಕುಮಾರಿ, ಕೃಷಿ ಮೇಲ್ವಿಚಾರಕ ಲೋಹಿತ್ ಗೌಡ, ವಲಯ ಮೇಲ್ವಿಚಾರಕ ಗಿರಿಜ, ರೇಣುಕಾಪ್ರಸಾದ್ ಹಾಗೂ ಸಂಘದ ಸೇವಾಪ್ರತಿನಿಧಿಗಳು, VLE ಸೇವಾದಾರರು, ಸಂಘದ ಸದಸ್ಯರು ಹಾಜರಿದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…