ದೊಡ್ಡಬಳ್ಳಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ(TAPMCS) ಸಂಘಕ್ಕೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಗುತ್ತಿಗೆದಾರ ಪುರುಷೋತ್ತಮ್ ಅವರಿಗೆ ಅಭಿನಂದನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.
ಅಭಿನಂದನೆ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪುರುಷೋತ್ತಮ್, ನ.2ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತಗಳನ್ನು ನೀಡಿ ನನನ್ನು ಗೆಲ್ಲಿಸಿದ ತಾಲೂಕಿನ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಗುತ್ತಿಗೆದಾರನಾಗಿ ತಾಲೂಕಿನಾದ್ಯಂತ ಕೆಲಸ ಮಾಡಿದ್ದೇನೆ. ಇದೀಗ ರೈತರ ಪರವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಗುತ್ತಿಗೆದಾರರಿಗೆ ಹಾಗೂ ತಾಲೂಕಿನ ರೈತರಿಗೆ ಟಿಎಪಿಎಂಸಿಎಸ್ ನಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಪ್ರಯತ್ನಪಡುತ್ತೇನೆ. ನಾನು ಗೆಲುವನ್ನು ಗುತ್ತಿಗೆದಾರರು ಎಲ್ಲರು ಸೇರಿ ಸಂಭ್ರಮಿಸಿ ನನಗೆ ಅಭಿನಂದನೆ ಸಲ್ಲಿಸುತ್ತಿರುವುದಕ್ಕೆ ನಾನು ಅವರಿಗೆಲ್ಲರಿಗು ಧನ್ಯವಾದ ತಿಳಿಸುತ್ತೇನೆ ಎಂದರು.
ನಂತರ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಗುತ್ತಿಗೆದಾರರ ಸಂಘ ಪ್ರಾರಂಭವಾಗಿ ಸುಮಾರು 30-40ವರ್ಷಗಳು ಕಳೆದಿವೆ. ಗುತ್ತಿಗೆದಾರರ ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಅದೇರೀತಿ ಅತಿ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಜಯಶೀಲರಾದ ಪುರುಷೋತ್ತಮ್ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದರು.
ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರ ಗಮನಕ್ಕೆ ಕಾಲಕಾಲಕ್ಕೆ ತರುತ್ತಿರುತ್ತೇವೆ. ಕೆಲವೊಂದು ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತೇವೆ. ಸದ್ಯ ಗುತ್ತಿಗೆದಾರರಿಗೆ ಕೆಲಸಗಳು ಸಿಗುತ್ತಿಲ್ಲ. ಎಲ್ಲವನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದರು.
ಈ ವೇಳೆ ಉಪಾಧ್ಯಕ್ಷ ಕೆ.ಬಿ ಬಚ್ಚೇಗೌಡ, ಖಜಾಂಚಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ವಿ.ಲಕ್ಷ್ಮೀಕಾಂತ್, ಗುತ್ತಿಗೆದಾರರಾದ ಹರೀಶ್, ಚನ್ನೇಗೌಡ, ಬ್ರಹ್ಮದೇವ, ರಾಜಣ್ಣ, ನಂದಕುಮಾರ್, ಕೆಂಪೇಗೌಡ ಸೇರಿದಂತೆ ಇತರೆ ಗುತ್ತಿಗೆದಾರರು ಉಪಸ್ಥಿತರಿದ್ದರು…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…