ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ TAPMCS ನೂತನ ಸದಸ್ಯ ಪುರುಷೋತ್ತಮ್ ಅವರಿಗೆ ಸನ್ಮಾನ

ದೊಡ್ಡಬಳ್ಳಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ(TAPMCS) ಸಂಘಕ್ಕೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಗುತ್ತಿಗೆದಾರ ಪುರುಷೋತ್ತಮ್ ಅವರಿಗೆ ಅಭಿನಂದನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.

ಅಭಿನಂದನೆ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪುರುಷೋತ್ತಮ್, ನ.2ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತಗಳನ್ನು ನೀಡಿ ನನನ್ನು ಗೆಲ್ಲಿಸಿದ ತಾಲೂಕಿನ‌ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಗುತ್ತಿಗೆದಾರನಾಗಿ ತಾಲೂಕಿನಾದ್ಯಂತ ಕೆಲಸ ಮಾಡಿದ್ದೇನೆ. ಇದೀಗ ರೈತರ ಪರವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಗುತ್ತಿಗೆದಾರರಿಗೆ ಹಾಗೂ ತಾಲೂಕಿನ ರೈತರಿಗೆ ಟಿಎಪಿಎಂಸಿಎಸ್ ನಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಪ್ರಯತ್ನಪಡುತ್ತೇನೆ. ನಾನು ಗೆಲುವನ್ನು ಗುತ್ತಿಗೆದಾರರು ಎಲ್ಲರು ಸೇರಿ‌ ಸಂಭ್ರಮಿಸಿ ನನಗೆ ಅಭಿನಂದನೆ ಸಲ್ಲಿಸುತ್ತಿರುವುದಕ್ಕೆ ನಾನು ಅವರಿಗೆಲ್ಲರಿಗು ಧನ್ಯವಾದ ತಿಳಿಸುತ್ತೇನೆ ಎಂದರು.

ನಂತರ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಗುತ್ತಿಗೆದಾರರ ಸಂಘ ಪ್ರಾರಂಭವಾಗಿ ಸುಮಾರು 30-40ವರ್ಷಗಳು ಕಳೆದಿವೆ. ಗುತ್ತಿಗೆದಾರರ ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಅದೇರೀತಿ ಅತಿ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಜಯಶೀಲರಾದ ಪುರುಷೋತ್ತಮ್ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ‌ ಎಂದರು.

ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರ ಗಮನಕ್ಕೆ ಕಾಲಕಾಲಕ್ಕೆ ತರುತ್ತಿರುತ್ತೇವೆ. ಕೆಲವೊಂದು ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತೇವೆ. ಸದ್ಯ ಗುತ್ತಿಗೆದಾರರಿಗೆ ಕೆಲಸಗಳು ಸಿಗುತ್ತಿಲ್ಲ. ಎಲ್ಲವನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೆ.ಬಿ ಬಚ್ಚೇಗೌಡ, ಖಜಾಂಚಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ವಿ.ಲಕ್ಷ್ಮೀಕಾಂತ್, ಗುತ್ತಿಗೆದಾರರಾದ ಹರೀಶ್, ಚನ್ನೇಗೌಡ, ಬ್ರಹ್ಮದೇವ, ರಾಜಣ್ಣ, ನಂದಕುಮಾರ್, ಕೆಂಪೇಗೌಡ ಸೇರಿದಂತೆ ಇತರೆ ಗುತ್ತಿಗೆದಾರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

9 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago