ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ TAPMCS ನೂತನ ಸದಸ್ಯ ಪುರುಷೋತ್ತಮ್ ಅವರಿಗೆ ಸನ್ಮಾನ

ದೊಡ್ಡಬಳ್ಳಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ(TAPMCS) ಸಂಘಕ್ಕೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಗುತ್ತಿಗೆದಾರ ಪುರುಷೋತ್ತಮ್ ಅವರಿಗೆ ಅಭಿನಂದನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.

ಅಭಿನಂದನೆ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪುರುಷೋತ್ತಮ್, ನ.2ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತಗಳನ್ನು ನೀಡಿ ನನನ್ನು ಗೆಲ್ಲಿಸಿದ ತಾಲೂಕಿನ‌ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಗುತ್ತಿಗೆದಾರನಾಗಿ ತಾಲೂಕಿನಾದ್ಯಂತ ಕೆಲಸ ಮಾಡಿದ್ದೇನೆ. ಇದೀಗ ರೈತರ ಪರವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಗುತ್ತಿಗೆದಾರರಿಗೆ ಹಾಗೂ ತಾಲೂಕಿನ ರೈತರಿಗೆ ಟಿಎಪಿಎಂಸಿಎಸ್ ನಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಪ್ರಯತ್ನಪಡುತ್ತೇನೆ. ನಾನು ಗೆಲುವನ್ನು ಗುತ್ತಿಗೆದಾರರು ಎಲ್ಲರು ಸೇರಿ‌ ಸಂಭ್ರಮಿಸಿ ನನಗೆ ಅಭಿನಂದನೆ ಸಲ್ಲಿಸುತ್ತಿರುವುದಕ್ಕೆ ನಾನು ಅವರಿಗೆಲ್ಲರಿಗು ಧನ್ಯವಾದ ತಿಳಿಸುತ್ತೇನೆ ಎಂದರು.

ನಂತರ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಗುತ್ತಿಗೆದಾರರ ಸಂಘ ಪ್ರಾರಂಭವಾಗಿ ಸುಮಾರು 30-40ವರ್ಷಗಳು ಕಳೆದಿವೆ. ಗುತ್ತಿಗೆದಾರರ ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಅದೇರೀತಿ ಅತಿ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಜಯಶೀಲರಾದ ಪುರುಷೋತ್ತಮ್ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ‌ ಎಂದರು.

ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರ ಗಮನಕ್ಕೆ ಕಾಲಕಾಲಕ್ಕೆ ತರುತ್ತಿರುತ್ತೇವೆ. ಕೆಲವೊಂದು ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತೇವೆ. ಸದ್ಯ ಗುತ್ತಿಗೆದಾರರಿಗೆ ಕೆಲಸಗಳು ಸಿಗುತ್ತಿಲ್ಲ. ಎಲ್ಲವನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೆ.ಬಿ ಬಚ್ಚೇಗೌಡ, ಖಜಾಂಚಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ವಿ.ಲಕ್ಷ್ಮೀಕಾಂತ್, ಗುತ್ತಿಗೆದಾರರಾದ ಹರೀಶ್, ಚನ್ನೇಗೌಡ, ಬ್ರಹ್ಮದೇವ, ರಾಜಣ್ಣ, ನಂದಕುಮಾರ್, ಕೆಂಪೇಗೌಡ ಸೇರಿದಂತೆ ಇತರೆ ಗುತ್ತಿಗೆದಾರರು ಉಪಸ್ಥಿತರಿದ್ದರು…

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

58 minutes ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 hour ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

4 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

7 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

9 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

13 hours ago