ದೊಡ್ಡಬಳ್ಳಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ(TAPMCS) ಸಂಘಕ್ಕೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಗುತ್ತಿಗೆದಾರ ಪುರುಷೋತ್ತಮ್ ಅವರಿಗೆ ಅಭಿನಂದನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.
ಅಭಿನಂದನೆ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪುರುಷೋತ್ತಮ್, ನ.2ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತಗಳನ್ನು ನೀಡಿ ನನನ್ನು ಗೆಲ್ಲಿಸಿದ ತಾಲೂಕಿನ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಗುತ್ತಿಗೆದಾರನಾಗಿ ತಾಲೂಕಿನಾದ್ಯಂತ ಕೆಲಸ ಮಾಡಿದ್ದೇನೆ. ಇದೀಗ ರೈತರ ಪರವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಗುತ್ತಿಗೆದಾರರಿಗೆ ಹಾಗೂ ತಾಲೂಕಿನ ರೈತರಿಗೆ ಟಿಎಪಿಎಂಸಿಎಸ್ ನಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಪ್ರಯತ್ನಪಡುತ್ತೇನೆ. ನಾನು ಗೆಲುವನ್ನು ಗುತ್ತಿಗೆದಾರರು ಎಲ್ಲರು ಸೇರಿ ಸಂಭ್ರಮಿಸಿ ನನಗೆ ಅಭಿನಂದನೆ ಸಲ್ಲಿಸುತ್ತಿರುವುದಕ್ಕೆ ನಾನು ಅವರಿಗೆಲ್ಲರಿಗು ಧನ್ಯವಾದ ತಿಳಿಸುತ್ತೇನೆ ಎಂದರು.
ನಂತರ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಗುತ್ತಿಗೆದಾರರ ಸಂಘ ಪ್ರಾರಂಭವಾಗಿ ಸುಮಾರು 30-40ವರ್ಷಗಳು ಕಳೆದಿವೆ. ಗುತ್ತಿಗೆದಾರರ ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಅದೇರೀತಿ ಅತಿ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಜಯಶೀಲರಾದ ಪುರುಷೋತ್ತಮ್ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದರು.
ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರ ಗಮನಕ್ಕೆ ಕಾಲಕಾಲಕ್ಕೆ ತರುತ್ತಿರುತ್ತೇವೆ. ಕೆಲವೊಂದು ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತೇವೆ. ಸದ್ಯ ಗುತ್ತಿಗೆದಾರರಿಗೆ ಕೆಲಸಗಳು ಸಿಗುತ್ತಿಲ್ಲ. ಎಲ್ಲವನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದರು.
ಈ ವೇಳೆ ಉಪಾಧ್ಯಕ್ಷ ಕೆ.ಬಿ ಬಚ್ಚೇಗೌಡ, ಖಜಾಂಚಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ವಿ.ಲಕ್ಷ್ಮೀಕಾಂತ್, ಗುತ್ತಿಗೆದಾರರಾದ ಹರೀಶ್, ಚನ್ನೇಗೌಡ, ಬ್ರಹ್ಮದೇವ, ರಾಜಣ್ಣ, ನಂದಕುಮಾರ್, ಕೆಂಪೇಗೌಡ ಸೇರಿದಂತೆ ಇತರೆ ಗುತ್ತಿಗೆದಾರರು ಉಪಸ್ಥಿತರಿದ್ದರು…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…