ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ TAPMCS ನೂತನ ಸದಸ್ಯ ಪುರುಷೋತ್ತಮ್ ಅವರಿಗೆ ಸನ್ಮಾನ

ದೊಡ್ಡಬಳ್ಳಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ(TAPMCS) ಸಂಘಕ್ಕೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಗುತ್ತಿಗೆದಾರ ಪುರುಷೋತ್ತಮ್ ಅವರಿಗೆ ಅಭಿನಂದನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.

ಅಭಿನಂದನೆ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪುರುಷೋತ್ತಮ್, ನ.2ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತಗಳನ್ನು ನೀಡಿ ನನನ್ನು ಗೆಲ್ಲಿಸಿದ ತಾಲೂಕಿನ‌ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಗುತ್ತಿಗೆದಾರನಾಗಿ ತಾಲೂಕಿನಾದ್ಯಂತ ಕೆಲಸ ಮಾಡಿದ್ದೇನೆ. ಇದೀಗ ರೈತರ ಪರವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಗುತ್ತಿಗೆದಾರರಿಗೆ ಹಾಗೂ ತಾಲೂಕಿನ ರೈತರಿಗೆ ಟಿಎಪಿಎಂಸಿಎಸ್ ನಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಪ್ರಯತ್ನಪಡುತ್ತೇನೆ. ನಾನು ಗೆಲುವನ್ನು ಗುತ್ತಿಗೆದಾರರು ಎಲ್ಲರು ಸೇರಿ‌ ಸಂಭ್ರಮಿಸಿ ನನಗೆ ಅಭಿನಂದನೆ ಸಲ್ಲಿಸುತ್ತಿರುವುದಕ್ಕೆ ನಾನು ಅವರಿಗೆಲ್ಲರಿಗು ಧನ್ಯವಾದ ತಿಳಿಸುತ್ತೇನೆ ಎಂದರು.

ನಂತರ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಗುತ್ತಿಗೆದಾರರ ಸಂಘ ಪ್ರಾರಂಭವಾಗಿ ಸುಮಾರು 30-40ವರ್ಷಗಳು ಕಳೆದಿವೆ. ಗುತ್ತಿಗೆದಾರರ ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಅದೇರೀತಿ ಅತಿ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಜಯಶೀಲರಾದ ಪುರುಷೋತ್ತಮ್ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ‌ ಎಂದರು.

ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರ ಗಮನಕ್ಕೆ ಕಾಲಕಾಲಕ್ಕೆ ತರುತ್ತಿರುತ್ತೇವೆ. ಕೆಲವೊಂದು ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತೇವೆ. ಸದ್ಯ ಗುತ್ತಿಗೆದಾರರಿಗೆ ಕೆಲಸಗಳು ಸಿಗುತ್ತಿಲ್ಲ. ಎಲ್ಲವನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೆ.ಬಿ ಬಚ್ಚೇಗೌಡ, ಖಜಾಂಚಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ವಿ.ಲಕ್ಷ್ಮೀಕಾಂತ್, ಗುತ್ತಿಗೆದಾರರಾದ ಹರೀಶ್, ಚನ್ನೇಗೌಡ, ಬ್ರಹ್ಮದೇವ, ರಾಜಣ್ಣ, ನಂದಕುಮಾರ್, ಕೆಂಪೇಗೌಡ ಸೇರಿದಂತೆ ಇತರೆ ಗುತ್ತಿಗೆದಾರರು ಉಪಸ್ಥಿತರಿದ್ದರು…

Ramesh Babu

Journalist

Recent Posts

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

5 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

5 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

5 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

5 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

6 hours ago

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

8 hours ago