ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು ಬಣಗಳು ಉದ್ಭವಾಗಿವೆ. ಈ ಎರಡು ಬಣಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ದೊಡ್ಡತನವನ್ನು ಜಿಲ್ಲಾಧ್ಯಕ್ಷರಾದವರು ತೋರಬೇಕಿದೆ ಎಂದು ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್ ತಿಳಿಸಿದ್ದಾರೆ.

ದೊಡ್ಡಬೆಳವಂಗಲ ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ 25ನೇ ವರ್ಷದ ಬೆಳ್ಳಿಹಬ್ಬದ ಸಮಾಲೋಚನಾ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ನಿಕಟಪೂರ್ವ ಜಿಲ್ಲಾಧ್ಯಕ್ಷರಾಗಿದ್ದ ಬಿ.ಮುನೇಗೌಡ ಅವರ ಜೊತೆ ಸಂವಾದ ನಡೆಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಭಾಗವಹಿಸುವ ಮೂಲಕ ನಮ್ಮ ಶಕ್ತಿ ತೋರಿಸಬೇಕು ಎಂದರು.

ಯುವ ಜೆಡಿಎಸ್ ಮುಖಂಡರಾದ ಶ್ರೀನಿವಾಸ್ ಗೌಡ ಮಾತನಾಡಿ, ಇದು ನಿಷ್ಠಾವಂತ ಕಾರ್ಯಕರ್ತರ ಒಗ್ಗೂಡಿಸುವ ಕಾರ್ಯ. ಇದನ್ನು ಹುಸ್ಕೂರ್ ಆನಂದ್ ನೇತೃತ್ವದಲ್ಲಿ ಮಾಡಿತ್ತಿದ್ದೇವೆ, ಮೇ.8ರಂದು ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ನಿಷ್ಠಾವಂತ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಾವು ಯಾರ ವಿರೋಧಿಗಳಲ್ಲ. ಎಲ್ಲರ ಜೊತೆಗೂಡಿ ಪಕ್ಷ ಸಂಘಟನೆ ಮಾಡಿ ಎಂಬುದಷ್ಟೇ ನಮ್ಮ ಅಗ್ರಹ. ನಮ್ಮಿಂದ ಮೇ.8ರ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ಎಲ್ಲರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ ಎಂದರು.

ವಕೀಲರಾದ ಸತೀಶ್ ಮಾತನಾಡಿ, ಕಳೆದ 35 ವರ್ಷಗಳಿಂದ ನಿರಂತರವಾಗಿ ಪಕ್ಷ ಕಟ್ಟುವ ಕೆಲಸ ಮಾಡಿದ್ದೇವೆ. ಈವರೆಗೂ ಯಾವುದೇ ಅಧಿಕಾರ ಬಯಸದೆ ಪಕ್ಷ ನಿಷ್ಠೆಯಿಂದ ಪಕ್ಷದ ಅಭಿವೃದ್ಧಿಗಾಗಿ ಶ್ರಮಿಸಿದ್ದೇವೆ. ಕಳೆದ ಬಮೂಲ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಇಂದು ಅಧಿಕಾರ ನೀಡಿರುವುದು ನಮಗೆ ನೋವುಂಟುಮಾಡಿದೆ. ಪಕ್ಷದ ರಾಜ್ಯ ವರಿಷ್ಠರು ಹಾಗೂ ಜಿಲ್ಲಾ ವರಿಷ್ಟರ ಆದೇಶದ ಮೇರೆಗೆ ಹುಸ್ಕೂರ್ ಆನಂದ್ ಚುನಾವಣೆಗೆ ಸ್ಪರ್ಧಿಸಿದರು. ಆದರೆ, ಅವರಿಗೆ ಕೊಟ್ಟ ಬಳುವಳಿ ಸೋಲು. ಇಂದು ಅವರೇ ಅಧಿಕಾರ ಪಡೆದ್ದಿದ್ದಾರೆ ಇದು ಸರಿಯೇ ಎಂದು ಪ್ರಶ್ನೆ ಮಾಡಿದರು.

ಇಂದು ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ. ಇನ್ನಾದರೂ ಇಂತಹ ಕಾರ್ಯಗಳು ನಿಲ್ಲಬೇಕು. ನಾವು ಸಾಕಷ್ಟು ಸೋಲು ಕಂಡಿದ್ದೇವೆ. ಆದರೂ, ಇಂದಿಗೂ ನಾವು ಜೆಡಿಎಸ್ ಪಕ್ಷ ಬಿಟ್ಟಿಲ್ಲ, ಇಂದಿಗೂ ಶಾಲು ಹಾಕುತ್ತೇವೆ ಅಂದರೆ ಅದು ದೇವೇಗೌಡರ ಮೇಲಿನ ಗೌರವ, ಎಚ್ ಡಿ ಕುಮಾರಸ್ವಾಮಿಯವರ ಮೇಲಿನ ಭರವಸೆ, ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ಮೇಲಿನ ಭವಿಷ್ಯದ ಆಶಯ. ಅದನ್ನು ಉಳಿಸುವ ಕಾರ್ಯ ವರಿಷ್ಠರಿಂದ ಆಗಬೇಕಿದೆ ಎಂದರು.

ಈ ವೇಳೆ ಚನ್ನೇಗೌಡ, ರಾಜಣ್ಣ ಹನುಮಂತ ರಾಜು, ಸುರೇಶ, ಮೂರ್ತಿ, ನಾರಾಯಣ ಸ್ವಾಮಿ, ಅಶ್ವಥ್ ನಾರಾಯಣ್, ರಾಜು, ನಾಗರಾಜ್ ಹನುಮಂತರಾಯಪ್ಪ, ಜಗದೀಶ್, ಪುನೀತ್ ಅಪ್ಪು ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

2 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

13 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

14 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

14 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago