ತಾಲ್ಲೂಕಿನಲ್ಲಿ ಮಿತಿಮೀರಿದ ಭೂಗಳ್ಳರ ಹಾವಳಿ: ಭೂಗಳ್ಳರ ಹಾವಳಿಗೆ ನಲುಗುತ್ತಿರುವ ಬಡ, ರೈತ ಕುಟುಂಬಗಳು

ಗೋಮಾಳ ಸೇರಿದಂತೆ ಸರ್ಕಾರಿ ರಸ್ತೆ, ಹಳ್ಳ-ಕೊಳ್ಳ ಒತ್ತುವರಿ ಮಾಡುತ್ತಿದ್ದ ಭೂಗಳ್ಳರ ಕಾಕದೃಷ್ಟಿ ಈಗ ಅಶಕ್ತ ಕುಟುಂಬಗಳ ಜಮೀನಿನ ಮೇಲೆ ಬಿದ್ದಿದೆ. ಕಂದಾಯ ಇಲಾಖೆ ಅಧಿಕಾರಿಗಳ ಕೃಪಾಕಟಾಕ್ಷದಿಂದ ಬಲಾಢ್ಯರು, ಭೂಮಾಫಿಯಾದವರು ನಕಲಿ ದಾಖಲೆ ಸೃಷ್ಟಿಸಿ ಬಡವರ‌ ಜಮೀನು ಕಬಳಿಸುತ್ತಿದ್ದಾರೆ.

ಪೊಲೀಸ್ ಇಲಾಖೆ, ನ್ಯಾಯಾಲಯದ ಮೆಟ್ಟಿಲೇರಿದರೂ ಬಡವರಿಗೆ ನ್ಯಾಯ‌ ಮರೀಚಿಕೆಯಾಗಿದೆ.‌

ತಾಲೂಕಿನ ತೂಬಗೆರೆ ಹೋಬಳಿ ಹೆಗ್ಗಡಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಣಿವೆಪುರದಲ್ಲಿ‌ ಸುಮಾರು 50 ವರ್ಷಗಳಿಂದ ಅನುಭವದಲ್ಲಿದ್ದ ಕೃಷ್ಣಪ್ಪ ಅವರು, 30 ವರ್ಷಗಳ ಹಿಂದೆ ಕಿಮ್ಮತ್ತು ಕಟ್ಟಿ ಭೂಮಿಯೊಂದಿಗೆ ಬದುಕು ಕಟ್ಟಿಕೊಂಡಿದ್ದಾರೆ. ಈಗ ಭೂಗಳ್ಳರ ಕಾಟದಿಂದ ಇಡೀ ಕುಟುಂಬ, ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದೆ.

ನ್ಯಾಯಾಲಯದಲ್ಲಿ ಮೊಕದ್ದಮೆ ಇದ್ದರೂ ಭೂಗಳ್ಳರು ವಾಮಾಮಾರ್ಗದಲ್ಲಿ ಒಕ್ಕಲೆಬ್ಬಿಸುತ್ತಿದ್ದಾರೆ. ಅವರಿಂದ ನಮಗೆ ರಕ್ಷಣೆ ಕಲ್ಪಿಸಬೇಕು ಎಂದು ಜಮೀನಿನ ಮಾಲೀಕರಾದ ಗಾಯತ್ರಿಮ್ಮ ಮನವಿ ಮಾಡಿಕೊಂಡರು.

ಏನಿದು ವಿವಾದ?
ಕಣಿವೆಪುರ ಗ್ರಾಮದ ಸರ್ವೆ ನಂಬರ್ 102/1 ರಲ್ಲಿರುವ ಒಟ್ಟು 9.17 ಗುಂಟೆ ಜಮೀನಿಗೆ ಸಂಬಂಧಿಸಿ ನರಸಪ್ಪನವರ ಮಗನಾದ ಕೃಷ್ಣಪ್ಪ ಅವರಿಗೆ 1994ರಲ್ಲಿ ಆರ್. ಎಲ್. ಜಾಲಪ್ಪ ಅಧ್ಯಕ್ಷತೆಯ ಭೂ ಮಂಜೂರಾತಿ ಸಲಹಾ ಸಮಿತಿ ಷರತ್ತುಗಳನ್ನು ಒಳಗೊಂಡ ಹಕ್ಕುಪತ್ರ, ಕಿಮ್ಮತ್ ಕಟ್ಟಿಸಿಕೊಂಡು 2.10 ಎಕರೆ ಮಂಜೂರು ಮಾಡಲಾಗಿತ್ತು.

ಅಂದಿನ ಭೂ‌ಮಂಜೂರಾತಿ ಸಲಹಾ ಸಮಿತಿಯಲ್ಲಿ ಟಿ .ಕೆಂಪಹನುಮಯ್ಯ, ಲಕ್ಷ್ಮಿದೇವಮ್ಮ, ಕೆ. ಸಿ.ಗುರುರಾಜಪ್ಪ ಸದಸ್ಯರಾಗಿದ್ದರು. ಈ ಸಮಿತಿಯ ಆದೇಶದಂತೆ 2.10 ಗುಂಟೆ ಜಮೀನಿನಲ್ಲಿ ಕೃಷ್ಣಪ್ಪ ಬಿನ್ ನರಸಪ್ಪನವರ ಕುಟುಂಬ ವ್ಯವಸಾಯ ಮಾಡುತ್ತಿತ್ತು. ಈ ಮಧ್ಯೆ ಚಿಕ್ಕಬಳ್ಳಾಪುರದ ನಿವಾಸಿಯಾದ ಕೃಷ್ಣಪ್ಪ ಬಿನ್ ಗಿರಿಯಪ್ಪ ಎಂಬುವರು ಆಂಧ್ರ ಮೂಲದ ಕೆಲ ಪ್ರಭಾವಿಗಳ ಬೆಂಬಲದಿಂದ 2006ರಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ 9.17 ಗುಂಟೆ ಜಮೀನು ಪೈಕಿ 5.10ಗುಂಟೆ ಜಮೀನನ್ನು ಕೃಷ್ಣಪ್ಪ ಸನ್ ಆಫ್ ಗಿರಿಯಪ್ಪ ಅವರ ಹೆಸರಿಗೆ ಎಸಿ ಕಚೇರಿಯಲ್ಲಿ ಅಕ್ರಮವಾಗಿ ಆದೇಶ ಮಾಡಿಸಿಕೊಂಡಿದ್ದಾರೆ. ಹಾಗೆಯೇ ಡಿಸಿ ಕಚೇರಿಯಲ್ಲಿ ಆರ್. ಪಿ.ಸಂಖ್ಯೆ 102/2015 16 ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಅಡಕ್ರಮವಾಗಿ ಆದೇಶ ಮಾಡಿಸಿಕೊಂಡಿದ್ದಾರೆ. ಇನ್ನು ಉಳಿಕೆ 3.24 ಎಕರೆ ಜಮೀನನಲ್ಲಿ 2.10ಎಕರೆ ನಮ್ಮ ಹೆಸರಿನಲ್ಲೇ ಇದೆ. ಈಗ ಪಹಣಿಯಲ್ಲಿ ಸರ್ಕಾರಿ ಫಡ ಎಂದು ಹೆಸರಿಸಿ,ಅಧಿಕಾರಿಗಳ ಮೂಲಕ‌ ಕಬಳಿಸಲು ಯತ್ನಿಸುತ್ತಿದ್ದಾರೆ. ಬಾಡಿಗೆ ಗೂಂಡಾಗಳು ಹಾಗೂ ದಲ್ಲಾಳಿಗಳನ್ನು ಕರೆತಂದು ಬೆದರಿಸುತ್ತಿದ್ದಾರೆ ಎಂದು ಗಾಯಿತ್ರಮ್ಮ ಆರೋಪಿಸಿದರು.

ನಮ್ಮದು ಸಾಮಾನ್ಯ ಕುಟುಂಬ. ಈಗಾಗಲೇ ಸಾಕಷ್ಟು ನೊಂದು ಬೆಂದಿದ್ದೇವೆ. ನನ್ನ ಪತಿ ಕೆ.ರಾಜು ಅವರ ಆರೋಗ್ಯ ಸ್ಥಿತಿ ಕೂಡ ಸರಿಯಿಲ್ಲ. ನನ್ನ ನಾದಿನಿ ನ್ಯಾಯಾಲಯದಲ್ಲಿ ಭಾಗಾಂಶದ ದಾವೆ ಹೂಡಿ ತಡೆ ತಂದಿರುವವುದರಿಂದ ಭೂಗಳ್ಳರು ತಂತಿ ಬೇಲಿ ಹಿಂದೂ ಮುಂದೂ ನೋಡುತ್ತಿದ್ದಾರೆ. ಅಧಿಕಾರಿಗಳು ಕೂಡ ಬಲಾಢ್ಯರ ಪರ ನಿಂತು ನಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.

ಚಿಕ್ಕಬಳ್ಳಾಪುರದ ಕೃಷ್ಣಪ್ಪ ಬಿನ್ ಗಿರಿಯಪ್ಪ ಅವರ ಬಳಿ ಯಾವುದೇ ರೀತಿ ದಾಖಲಾತಿಗಳಿಲ್ಲ. ದಾಖಲಾತಿಗಳಿಲ್ಲದೆ ಅಕ್ರಮವಾಗಿ ನಮ್ಮ ಜಾಗವನ್ನು ಕಬಳಿಸಲು ಹುನ್ನಾರ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಇದು ನಮ್ಮ ಭೂಮಿ ನಮ್ಮ ಪೂರ್ವಿಕರಿಗೆ ಸೇರಿದ್ದು, ಸ್ಥಳೀಯ ಅಧಿಕಾರಿಗಳು ಎಚ್ಚೆತ್ತು ಬಡವರ ಪರ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ಸಿವಿಲ್ ನ್ಯಾಯಾಲಯದಲ್ಲಿ ದಾಖಲಾಗಿರುವ ಮೊಕದ್ದಮೆಯಲ್ಲಿ ಚಿಕ್ಕಬಳ್ಳಾಪುರದ ನಿವಾಸಿ ಕೃಷ್ಣಪ್ಪ ಬಿನ್ ಗಿರಿಯಪ್ಪ ಅವರ ಮೇಲೆ ಡಿಕ್ಲರೇಷನ್ ಡಿಡೆಕ್ಷನ್ ಇಂಜೆಕ್ಷನ್ ಆರ್ಡರ್ ಇದೆ. ಪ್ರಸ್ತುತ ವಿಚಾರಣೆ ಹಂತದಲ್ಲಿದೆ. ಆದರೆ ನ್ಯಾಯಾಲಯದ ಆದೇಶವನ್ನೂ ಲೆಕ್ಕಿಸದೇ ಭೂಗಳ್ಳರು, ದಲ್ಲಾಳಿಗಳು ನಮ್ಮನ್ನು ಸ್ಥಳದಿಂದ ಒಕ್ಕಲೆಬ್ಬಿಸಲು ಯತ್ನಿಸುತ್ತಿದ್ದಾರೆ. ನಮಗೆ ಪೊಲೀಸರು ಸೂಕ್ತ ರಕ್ಷಣೆ ಕಲ್ಪಿಸಬೇಕೆಂದು ಕೋರಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

15 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

16 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

17 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

17 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago