ತಾಲ್ಲೂಕಿನಲ್ಲಿ ಮಿತಿಮೀರಿದ ಭೂಗಳ್ಳರ ಹಾವಳಿ: ಭೂಗಳ್ಳರ ಹಾವಳಿಗೆ ನಲುಗುತ್ತಿರುವ ಬಡ, ರೈತ ಕುಟುಂಬಗಳು

ಗೋಮಾಳ ಸೇರಿದಂತೆ ಸರ್ಕಾರಿ ರಸ್ತೆ, ಹಳ್ಳ-ಕೊಳ್ಳ ಒತ್ತುವರಿ ಮಾಡುತ್ತಿದ್ದ ಭೂಗಳ್ಳರ ಕಾಕದೃಷ್ಟಿ ಈಗ ಅಶಕ್ತ ಕುಟುಂಬಗಳ ಜಮೀನಿನ ಮೇಲೆ ಬಿದ್ದಿದೆ. ಕಂದಾಯ ಇಲಾಖೆ ಅಧಿಕಾರಿಗಳ ಕೃಪಾಕಟಾಕ್ಷದಿಂದ ಬಲಾಢ್ಯರು, ಭೂಮಾಫಿಯಾದವರು ನಕಲಿ ದಾಖಲೆ ಸೃಷ್ಟಿಸಿ ಬಡವರ‌ ಜಮೀನು ಕಬಳಿಸುತ್ತಿದ್ದಾರೆ.

ಪೊಲೀಸ್ ಇಲಾಖೆ, ನ್ಯಾಯಾಲಯದ ಮೆಟ್ಟಿಲೇರಿದರೂ ಬಡವರಿಗೆ ನ್ಯಾಯ‌ ಮರೀಚಿಕೆಯಾಗಿದೆ.‌

ತಾಲೂಕಿನ ತೂಬಗೆರೆ ಹೋಬಳಿ ಹೆಗ್ಗಡಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಣಿವೆಪುರದಲ್ಲಿ‌ ಸುಮಾರು 50 ವರ್ಷಗಳಿಂದ ಅನುಭವದಲ್ಲಿದ್ದ ಕೃಷ್ಣಪ್ಪ ಅವರು, 30 ವರ್ಷಗಳ ಹಿಂದೆ ಕಿಮ್ಮತ್ತು ಕಟ್ಟಿ ಭೂಮಿಯೊಂದಿಗೆ ಬದುಕು ಕಟ್ಟಿಕೊಂಡಿದ್ದಾರೆ. ಈಗ ಭೂಗಳ್ಳರ ಕಾಟದಿಂದ ಇಡೀ ಕುಟುಂಬ, ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದೆ.

ನ್ಯಾಯಾಲಯದಲ್ಲಿ ಮೊಕದ್ದಮೆ ಇದ್ದರೂ ಭೂಗಳ್ಳರು ವಾಮಾಮಾರ್ಗದಲ್ಲಿ ಒಕ್ಕಲೆಬ್ಬಿಸುತ್ತಿದ್ದಾರೆ. ಅವರಿಂದ ನಮಗೆ ರಕ್ಷಣೆ ಕಲ್ಪಿಸಬೇಕು ಎಂದು ಜಮೀನಿನ ಮಾಲೀಕರಾದ ಗಾಯತ್ರಿಮ್ಮ ಮನವಿ ಮಾಡಿಕೊಂಡರು.

ಏನಿದು ವಿವಾದ?
ಕಣಿವೆಪುರ ಗ್ರಾಮದ ಸರ್ವೆ ನಂಬರ್ 102/1 ರಲ್ಲಿರುವ ಒಟ್ಟು 9.17 ಗುಂಟೆ ಜಮೀನಿಗೆ ಸಂಬಂಧಿಸಿ ನರಸಪ್ಪನವರ ಮಗನಾದ ಕೃಷ್ಣಪ್ಪ ಅವರಿಗೆ 1994ರಲ್ಲಿ ಆರ್. ಎಲ್. ಜಾಲಪ್ಪ ಅಧ್ಯಕ್ಷತೆಯ ಭೂ ಮಂಜೂರಾತಿ ಸಲಹಾ ಸಮಿತಿ ಷರತ್ತುಗಳನ್ನು ಒಳಗೊಂಡ ಹಕ್ಕುಪತ್ರ, ಕಿಮ್ಮತ್ ಕಟ್ಟಿಸಿಕೊಂಡು 2.10 ಎಕರೆ ಮಂಜೂರು ಮಾಡಲಾಗಿತ್ತು.

ಅಂದಿನ ಭೂ‌ಮಂಜೂರಾತಿ ಸಲಹಾ ಸಮಿತಿಯಲ್ಲಿ ಟಿ .ಕೆಂಪಹನುಮಯ್ಯ, ಲಕ್ಷ್ಮಿದೇವಮ್ಮ, ಕೆ. ಸಿ.ಗುರುರಾಜಪ್ಪ ಸದಸ್ಯರಾಗಿದ್ದರು. ಈ ಸಮಿತಿಯ ಆದೇಶದಂತೆ 2.10 ಗುಂಟೆ ಜಮೀನಿನಲ್ಲಿ ಕೃಷ್ಣಪ್ಪ ಬಿನ್ ನರಸಪ್ಪನವರ ಕುಟುಂಬ ವ್ಯವಸಾಯ ಮಾಡುತ್ತಿತ್ತು. ಈ ಮಧ್ಯೆ ಚಿಕ್ಕಬಳ್ಳಾಪುರದ ನಿವಾಸಿಯಾದ ಕೃಷ್ಣಪ್ಪ ಬಿನ್ ಗಿರಿಯಪ್ಪ ಎಂಬುವರು ಆಂಧ್ರ ಮೂಲದ ಕೆಲ ಪ್ರಭಾವಿಗಳ ಬೆಂಬಲದಿಂದ 2006ರಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ 9.17 ಗುಂಟೆ ಜಮೀನು ಪೈಕಿ 5.10ಗುಂಟೆ ಜಮೀನನ್ನು ಕೃಷ್ಣಪ್ಪ ಸನ್ ಆಫ್ ಗಿರಿಯಪ್ಪ ಅವರ ಹೆಸರಿಗೆ ಎಸಿ ಕಚೇರಿಯಲ್ಲಿ ಅಕ್ರಮವಾಗಿ ಆದೇಶ ಮಾಡಿಸಿಕೊಂಡಿದ್ದಾರೆ. ಹಾಗೆಯೇ ಡಿಸಿ ಕಚೇರಿಯಲ್ಲಿ ಆರ್. ಪಿ.ಸಂಖ್ಯೆ 102/2015 16 ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಅಡಕ್ರಮವಾಗಿ ಆದೇಶ ಮಾಡಿಸಿಕೊಂಡಿದ್ದಾರೆ. ಇನ್ನು ಉಳಿಕೆ 3.24 ಎಕರೆ ಜಮೀನನಲ್ಲಿ 2.10ಎಕರೆ ನಮ್ಮ ಹೆಸರಿನಲ್ಲೇ ಇದೆ. ಈಗ ಪಹಣಿಯಲ್ಲಿ ಸರ್ಕಾರಿ ಫಡ ಎಂದು ಹೆಸರಿಸಿ,ಅಧಿಕಾರಿಗಳ ಮೂಲಕ‌ ಕಬಳಿಸಲು ಯತ್ನಿಸುತ್ತಿದ್ದಾರೆ. ಬಾಡಿಗೆ ಗೂಂಡಾಗಳು ಹಾಗೂ ದಲ್ಲಾಳಿಗಳನ್ನು ಕರೆತಂದು ಬೆದರಿಸುತ್ತಿದ್ದಾರೆ ಎಂದು ಗಾಯಿತ್ರಮ್ಮ ಆರೋಪಿಸಿದರು.

ನಮ್ಮದು ಸಾಮಾನ್ಯ ಕುಟುಂಬ. ಈಗಾಗಲೇ ಸಾಕಷ್ಟು ನೊಂದು ಬೆಂದಿದ್ದೇವೆ. ನನ್ನ ಪತಿ ಕೆ.ರಾಜು ಅವರ ಆರೋಗ್ಯ ಸ್ಥಿತಿ ಕೂಡ ಸರಿಯಿಲ್ಲ. ನನ್ನ ನಾದಿನಿ ನ್ಯಾಯಾಲಯದಲ್ಲಿ ಭಾಗಾಂಶದ ದಾವೆ ಹೂಡಿ ತಡೆ ತಂದಿರುವವುದರಿಂದ ಭೂಗಳ್ಳರು ತಂತಿ ಬೇಲಿ ಹಿಂದೂ ಮುಂದೂ ನೋಡುತ್ತಿದ್ದಾರೆ. ಅಧಿಕಾರಿಗಳು ಕೂಡ ಬಲಾಢ್ಯರ ಪರ ನಿಂತು ನಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.

ಚಿಕ್ಕಬಳ್ಳಾಪುರದ ಕೃಷ್ಣಪ್ಪ ಬಿನ್ ಗಿರಿಯಪ್ಪ ಅವರ ಬಳಿ ಯಾವುದೇ ರೀತಿ ದಾಖಲಾತಿಗಳಿಲ್ಲ. ದಾಖಲಾತಿಗಳಿಲ್ಲದೆ ಅಕ್ರಮವಾಗಿ ನಮ್ಮ ಜಾಗವನ್ನು ಕಬಳಿಸಲು ಹುನ್ನಾರ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಇದು ನಮ್ಮ ಭೂಮಿ ನಮ್ಮ ಪೂರ್ವಿಕರಿಗೆ ಸೇರಿದ್ದು, ಸ್ಥಳೀಯ ಅಧಿಕಾರಿಗಳು ಎಚ್ಚೆತ್ತು ಬಡವರ ಪರ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ಸಿವಿಲ್ ನ್ಯಾಯಾಲಯದಲ್ಲಿ ದಾಖಲಾಗಿರುವ ಮೊಕದ್ದಮೆಯಲ್ಲಿ ಚಿಕ್ಕಬಳ್ಳಾಪುರದ ನಿವಾಸಿ ಕೃಷ್ಣಪ್ಪ ಬಿನ್ ಗಿರಿಯಪ್ಪ ಅವರ ಮೇಲೆ ಡಿಕ್ಲರೇಷನ್ ಡಿಡೆಕ್ಷನ್ ಇಂಜೆಕ್ಷನ್ ಆರ್ಡರ್ ಇದೆ. ಪ್ರಸ್ತುತ ವಿಚಾರಣೆ ಹಂತದಲ್ಲಿದೆ. ಆದರೆ ನ್ಯಾಯಾಲಯದ ಆದೇಶವನ್ನೂ ಲೆಕ್ಕಿಸದೇ ಭೂಗಳ್ಳರು, ದಲ್ಲಾಳಿಗಳು ನಮ್ಮನ್ನು ಸ್ಥಳದಿಂದ ಒಕ್ಕಲೆಬ್ಬಿಸಲು ಯತ್ನಿಸುತ್ತಿದ್ದಾರೆ. ನಮಗೆ ಪೊಲೀಸರು ಸೂಕ್ತ ರಕ್ಷಣೆ ಕಲ್ಪಿಸಬೇಕೆಂದು ಕೋರಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

11 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago