ತಾಲ್ಲೂಕಿನಲ್ಲಿ ಶುರುವಾಯ್ತು ಆಣೆ-ಪ್ರಮಾಣ ರಾಜಕೀಯ: ಶಾಸಕ ಧೀರಜ್ ವಿರುದ್ಧ ಏಕವಚನದಲ್ಲಿ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

 

ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ ಮೀರಿ ಮಾತನಾಡಿದ್ದಾಗಲಿ.. ಆಣೆ ಪ್ರಮಾಣ ರಾಜಕೀಯಗಳಾಗಲಿ.. ವೈಯಕ್ತಿಯ ಆರೋಪ – ಪ್ರತ್ಯಾರೋಪಗಳಾಗಿ ನಡೆದಿರಲಿಲ್ಲ. ಇದೀಗ ಬದಲಾದ ರಾಜಕಾರಣದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಮತ್ತು ಮಾಜಿ ಶಾಸಕ ವೆಂಕಟರಮಣಯ್ಯ ಮಧ್ಯೆ ವೈಯಕ್ತಿಯ ಆರೋಪ-ಪ್ರತ್ಯಾರೋಪಗಳು ಆರಂಭವಾಗಿದ್ದು, ಸವಾಲು – ಎದಿರು ಸವಾಲುಗಳು ನಡೆಯುತ್ತಿವೆ. ಮಾಜಿ ಶಾಸಕರ ವೆಂಕಟರಮಣಯ್ಯ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಅನುದಾನ ವಿಚಾರಗಳಿಗೆ ಸರ್ಕಾರದಲ್ಲಿ ಪರೋಕ್ಷವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ನೇರವಾಗಿ ದೂರುತ್ತಿದ್ದಾರೆ. ಇತ್ತ ಮಾಜಿ ಶಾಸಕ ವೆಂಕಟರಮಣಯ್ಯ ನಾನು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿಲ್ಲ. ಕುಣಿಯಲಾರದೆ ನೆಲ ಡೋಂಕು ಎನ್ನುತ್ತಿದ್ದಾರೆ. ಪ್ರಬುದ್ಧತೆಯೇ ಇಲ್ಲ, ಬೇಕಾದರೆ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳುತ್ತೇನೆ. ನೀನು ಬಂದು ಪ್ರಮಾಣ ಮಾಡು ಎಂದು ಶಾಸಕ ಧೀರಜ್ ಮುನಿರಾಜುಗೆ ಸವಾಲು ಹಾಕಿದ್ದಾರೆ.

‘ನಿನ್ನ ಕೈಲಿ ಒಂದು ಸಭೆ ಮಾಡಕ್ಕೆ ಆಗ್ತಿಲ್ಲ’..

ತಾಲ್ಲೂಕಿನ ನಿರಾಶ್ರಿತರ ಆಶಾಕಿರಣವಾದ ಆಶ್ರಯ ಕಮಿಟಿ, ವಿದ್ಯಾರ್ಥಿಗಳ ಅನುಕೂಲ ಮತ್ತು ಕಾಲೇಜು ಅಭಿವೃದ್ಧಿಗೆ ಕಾಲೇಜು ಕಮಿಟಿ, ಬಡ ರೋಗಿಗಳ ಸಂಜೀವಿನಿಯಾದ ಆಸ್ಪತ್ರೆ ಕಮಿಟಿ, ರೈತರ ಪರವಾದ ಭೂ ಮಂಜೂರಾತಿ ಕಮಿಟಿ ಸಭೆಗಳನ್ನು ಈವರೆಗೆ ಒಂದೇ ಒಂದು ಮಾಡಿಲ್ಲ. ಏನಕ್ಕೆ ನಿನ್ನ ಜನ ಆರಿಸಿರುವುದು. ನಾನು ಪ್ರತಿ ಎರಡು ಮೂರು ತಿಂಗಳಿಗೆ ಸಭೆ ಮಾಡ್ತಿದ್ದೆ. ಜಿಲ್ಲಾಆಸ್ಪತ್ರೆ ವಿಚಾರದಲ್ಲಿ ನನ್ನ ಕುಟುಂಬದವರ ಹೆಸರು ಹಾಕುವ ಆಸೆ ಇಲ್ಲ.. ತಾಲ್ಲೂಕಿನಲ್ಲಿ ಹಲವಾರು ಮಹನೀಯರಿದ್ದಾರೆ. ಜಿಲ್ಲಾಸ್ಪತ್ರೆಗೆ ಎಲ್ಲೂ ನಾನು ಅಡ್ಡಿಪಡಿಸಿಲ್ಲ. ಬೇಕಾದರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ ನೀನು ಬಾ.. ಎಂದು ಮಾಜಿ ಶಾಸಕ ವೆಂಕಟರಮಣಯ್ಯ, ಶಾಸಕ ಧೀರಜ್ ಮುನಿರಾಜುಗೆ ಸವಾಲು ಹಾಕಿದ್ದಾರೆ.

ಹಳೆ ಬಾಟಲ್ ಗೆ ಹೊಸ ಮದ್ಯ..

ರಾಮೇಗೌಡ ವೃತ್ತದಿಂದ ಕನಕದಾಸ ವೃತ್ತದವರೆಗೆ ರಸ್ತೆ ಅಭಿವೃದ್ದಿಗೆ ಎಸ್ಎಚ್.ಜಿಪಿ ಯೋಜನೆಯಡಿ ೧೦ ಕೋಟಿ ರೂ. ಟೆಂಡರ್ ಆಗಿದೆ. ಆದರೆ ನೀನು ಫೋಟೊ ಶೂಟ್ ಮಾಡಿಸಲು ಪೂರ್ಣ ರಸ್ತೆ ಅಭಿವೃದ್ಧಿ ಬಿಟ್ಟು, ವೈಟ್ ಟ್ಯಾಪಿಂಗ್ ಹೆಸರಲ್ಲಿ ಕೇವಲ ಒಂದು ಕಿಲೊಮೀಟರ್ ರಸ್ತೆ ಅಭಿವೃದ್ಧಿ ಮಾಡುತ್ತಿದ್ದಿಯಾ. ಆ ರಸ್ತೆಯ ಅಗಲೀಕರಣ ಮಾಡಿ ಡಾಂಬರು ಹಾಕಿ, ರಸ್ತೆ ಬದಿ ದೀಪಗಳನ್ನು ಹಾಕಿ ಅಭಿವೃದ್ಧಿ ಮಾಡಿದ್ದು ನಾನು, ಈಗ ಹಳೆ ರಸ್ತೆಯ ಬೀದಿ ದೀಪ, ಡಿವೈಡರ್ ಗಳನ್ನೇ ಬಳಸಿಕೊಂಡು ಫೋಟೊ ಶೂಟ್ ಮಾಡಿಸಿಕೊಂಡು ಜನರಿಗೆ ಯಾಮಾರಿಸುತ್ತಿದ್ದೀಯಾ. ಹಳೇ ಬಾಟಲ್ ಗೆ ಹೊಸ ಮದ್ಯ ಎಂಬಂತೆ ಕೆಲಸ ಮಾಡುತ್ತಿದ್ದಿಯಾ ಎಂದು ಮಾಜಿ ಶಾಸಕ ವೆಂಕಟರಮಣಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೋಟೋ ಶೂಟ್.. ಬಾಯ್ಬಿಟ್ಟರೆ ಸುಳ್ಳು…

ಇದು ಹಳೆದು. ಇದು ಹೊಸದು ಎಂದು ಫೋಟೋ, ವಿಡಿಯೋ ಹಾಕಿಕೊಳ್ಳಲು ಮಾತ್ರ ಸಿಮೀತವಾಗಿ ಕೆಲಸ ಮಾಡುವುದಲ್ಲ. ಬದಲಾಗಿ ತಾಲ್ಲೂಕಿನ ಜನರಿಗಾಗಿ ಮಾಡಬೇಕು. ಚುನಾವಣೆ ಸಮಯದಲ್ಲಿ ಹೇಳಿದ್ದ ಯಾವ ಕೆಲಸ ಮಾಡಿದ್ದೀಯಾ? ನವ ದೊಡ್ಡಬಳ್ಳಾಪುರ ಎಂದು ಜನರಿಗೆ ಮಂಕು ಬೂದಿ ಎರಚಿದ್ದೀಯಾ? ಬಾಯ್ಬಿಟ್ಟರೆ ಸುಳ್ಳು ಹೇಳ್ತಿಯಾ.‌ ನನಗೆ ಸುಳ್ಳು ಹೇಳಲು ಬರುವುದಿಲ್ಲ. ಎಂದು ಶಾಸಕ ಧೀರಜ್ ಮುನಿರಾಜು ವಿರುದ್ಧ ಹರಿಹಾಯ್ದಿದ್ದಾರೆ.

ರಾಜಕೀಯ ಉದ್ದೇಶಕ್ಕೆ ವೃಷಭಾವತಿಗೆ ವಿರೋಧ..

ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರಿನ ಶುದ್ಧೀಕರಿಸಿದ ನೀರನ್ನು (ವೃಷಭಾವತಿ ನೀರನ್ನು) ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹರಿಸಬೇಕೆಂದು ಯೋಜನೆ ಪ್ರಾರಂಭ ಮಾಡಲಾಗಿತ್ತು. ಅಧಿವೇಶನದಲ್ಲಿ ಅಂದು ನೆಲಮಂಗಲದಲ್ಲಿ ಜೆಡಿಎಸ್ ಶಾಸಕರಾಗಿದ್ದ ಶ್ರೀನಿವಾಸ್ ಮೂರ್ತಿ ಸಹ ಒಪ್ಪಿಕೊಂಡಿದ್ದರು, ಡಿಪಿಆರ್, ಟೆಂಡರ್ ಸಹ ಆಗಿದೆ. ಈಗ ಆ ನೀರು ಸರಿ‌ ಇಲ್ಲ ಎಂದರೆ ಹೇಗೆ? ರಾಜಕೀಯ ಉದ್ದೇಶಕ್ಕಾಗಿ ಇಂದು ಅದನ್ನ ಬೇಡ ಎನ್ನುವುದು ಎಷ್ಟು ಸರಿ.? ಬಸ್ ಮಾಡಿಕೊಂಡು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಹೋಗಿ ಅಲ್ಲಿನ ರೈತರನ್ನ ಮಾತನಾಡಿಸಿ, ಯಾವ ರೀತಿ ಅನುಕೂಲವಾಗಿದೆ ಎಂದು ಕೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

32 minutes ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

2 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

6 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

9 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago