ತಾಲ್ಲೂಕಿನಲ್ಲಿ ಶುರುವಾಯ್ತು ಆಣೆ-ಪ್ರಮಾಣ ರಾಜಕೀಯ: ಶಾಸಕ ಧೀರಜ್ ವಿರುದ್ಧ ಏಕವಚನದಲ್ಲಿ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

 

ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ ಮೀರಿ ಮಾತನಾಡಿದ್ದಾಗಲಿ.. ಆಣೆ ಪ್ರಮಾಣ ರಾಜಕೀಯಗಳಾಗಲಿ.. ವೈಯಕ್ತಿಯ ಆರೋಪ – ಪ್ರತ್ಯಾರೋಪಗಳಾಗಿ ನಡೆದಿರಲಿಲ್ಲ. ಇದೀಗ ಬದಲಾದ ರಾಜಕಾರಣದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಮತ್ತು ಮಾಜಿ ಶಾಸಕ ವೆಂಕಟರಮಣಯ್ಯ ಮಧ್ಯೆ ವೈಯಕ್ತಿಯ ಆರೋಪ-ಪ್ರತ್ಯಾರೋಪಗಳು ಆರಂಭವಾಗಿದ್ದು, ಸವಾಲು – ಎದಿರು ಸವಾಲುಗಳು ನಡೆಯುತ್ತಿವೆ. ಮಾಜಿ ಶಾಸಕರ ವೆಂಕಟರಮಣಯ್ಯ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಅನುದಾನ ವಿಚಾರಗಳಿಗೆ ಸರ್ಕಾರದಲ್ಲಿ ಪರೋಕ್ಷವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ನೇರವಾಗಿ ದೂರುತ್ತಿದ್ದಾರೆ. ಇತ್ತ ಮಾಜಿ ಶಾಸಕ ವೆಂಕಟರಮಣಯ್ಯ ನಾನು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿಲ್ಲ. ಕುಣಿಯಲಾರದೆ ನೆಲ ಡೋಂಕು ಎನ್ನುತ್ತಿದ್ದಾರೆ. ಪ್ರಬುದ್ಧತೆಯೇ ಇಲ್ಲ, ಬೇಕಾದರೆ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳುತ್ತೇನೆ. ನೀನು ಬಂದು ಪ್ರಮಾಣ ಮಾಡು ಎಂದು ಶಾಸಕ ಧೀರಜ್ ಮುನಿರಾಜುಗೆ ಸವಾಲು ಹಾಕಿದ್ದಾರೆ.

‘ನಿನ್ನ ಕೈಲಿ ಒಂದು ಸಭೆ ಮಾಡಕ್ಕೆ ಆಗ್ತಿಲ್ಲ’..

ತಾಲ್ಲೂಕಿನ ನಿರಾಶ್ರಿತರ ಆಶಾಕಿರಣವಾದ ಆಶ್ರಯ ಕಮಿಟಿ, ವಿದ್ಯಾರ್ಥಿಗಳ ಅನುಕೂಲ ಮತ್ತು ಕಾಲೇಜು ಅಭಿವೃದ್ಧಿಗೆ ಕಾಲೇಜು ಕಮಿಟಿ, ಬಡ ರೋಗಿಗಳ ಸಂಜೀವಿನಿಯಾದ ಆಸ್ಪತ್ರೆ ಕಮಿಟಿ, ರೈತರ ಪರವಾದ ಭೂ ಮಂಜೂರಾತಿ ಕಮಿಟಿ ಸಭೆಗಳನ್ನು ಈವರೆಗೆ ಒಂದೇ ಒಂದು ಮಾಡಿಲ್ಲ. ಏನಕ್ಕೆ ನಿನ್ನ ಜನ ಆರಿಸಿರುವುದು. ನಾನು ಪ್ರತಿ ಎರಡು ಮೂರು ತಿಂಗಳಿಗೆ ಸಭೆ ಮಾಡ್ತಿದ್ದೆ. ಜಿಲ್ಲಾಆಸ್ಪತ್ರೆ ವಿಚಾರದಲ್ಲಿ ನನ್ನ ಕುಟುಂಬದವರ ಹೆಸರು ಹಾಕುವ ಆಸೆ ಇಲ್ಲ.. ತಾಲ್ಲೂಕಿನಲ್ಲಿ ಹಲವಾರು ಮಹನೀಯರಿದ್ದಾರೆ. ಜಿಲ್ಲಾಸ್ಪತ್ರೆಗೆ ಎಲ್ಲೂ ನಾನು ಅಡ್ಡಿಪಡಿಸಿಲ್ಲ. ಬೇಕಾದರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ ನೀನು ಬಾ.. ಎಂದು ಮಾಜಿ ಶಾಸಕ ವೆಂಕಟರಮಣಯ್ಯ, ಶಾಸಕ ಧೀರಜ್ ಮುನಿರಾಜುಗೆ ಸವಾಲು ಹಾಕಿದ್ದಾರೆ.

ಹಳೆ ಬಾಟಲ್ ಗೆ ಹೊಸ ಮದ್ಯ..

ರಾಮೇಗೌಡ ವೃತ್ತದಿಂದ ಕನಕದಾಸ ವೃತ್ತದವರೆಗೆ ರಸ್ತೆ ಅಭಿವೃದ್ದಿಗೆ ಎಸ್ಎಚ್.ಜಿಪಿ ಯೋಜನೆಯಡಿ ೧೦ ಕೋಟಿ ರೂ. ಟೆಂಡರ್ ಆಗಿದೆ. ಆದರೆ ನೀನು ಫೋಟೊ ಶೂಟ್ ಮಾಡಿಸಲು ಪೂರ್ಣ ರಸ್ತೆ ಅಭಿವೃದ್ಧಿ ಬಿಟ್ಟು, ವೈಟ್ ಟ್ಯಾಪಿಂಗ್ ಹೆಸರಲ್ಲಿ ಕೇವಲ ಒಂದು ಕಿಲೊಮೀಟರ್ ರಸ್ತೆ ಅಭಿವೃದ್ಧಿ ಮಾಡುತ್ತಿದ್ದಿಯಾ. ಆ ರಸ್ತೆಯ ಅಗಲೀಕರಣ ಮಾಡಿ ಡಾಂಬರು ಹಾಕಿ, ರಸ್ತೆ ಬದಿ ದೀಪಗಳನ್ನು ಹಾಕಿ ಅಭಿವೃದ್ಧಿ ಮಾಡಿದ್ದು ನಾನು, ಈಗ ಹಳೆ ರಸ್ತೆಯ ಬೀದಿ ದೀಪ, ಡಿವೈಡರ್ ಗಳನ್ನೇ ಬಳಸಿಕೊಂಡು ಫೋಟೊ ಶೂಟ್ ಮಾಡಿಸಿಕೊಂಡು ಜನರಿಗೆ ಯಾಮಾರಿಸುತ್ತಿದ್ದೀಯಾ. ಹಳೇ ಬಾಟಲ್ ಗೆ ಹೊಸ ಮದ್ಯ ಎಂಬಂತೆ ಕೆಲಸ ಮಾಡುತ್ತಿದ್ದಿಯಾ ಎಂದು ಮಾಜಿ ಶಾಸಕ ವೆಂಕಟರಮಣಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೋಟೋ ಶೂಟ್.. ಬಾಯ್ಬಿಟ್ಟರೆ ಸುಳ್ಳು…

ಇದು ಹಳೆದು. ಇದು ಹೊಸದು ಎಂದು ಫೋಟೋ, ವಿಡಿಯೋ ಹಾಕಿಕೊಳ್ಳಲು ಮಾತ್ರ ಸಿಮೀತವಾಗಿ ಕೆಲಸ ಮಾಡುವುದಲ್ಲ. ಬದಲಾಗಿ ತಾಲ್ಲೂಕಿನ ಜನರಿಗಾಗಿ ಮಾಡಬೇಕು. ಚುನಾವಣೆ ಸಮಯದಲ್ಲಿ ಹೇಳಿದ್ದ ಯಾವ ಕೆಲಸ ಮಾಡಿದ್ದೀಯಾ? ನವ ದೊಡ್ಡಬಳ್ಳಾಪುರ ಎಂದು ಜನರಿಗೆ ಮಂಕು ಬೂದಿ ಎರಚಿದ್ದೀಯಾ? ಬಾಯ್ಬಿಟ್ಟರೆ ಸುಳ್ಳು ಹೇಳ್ತಿಯಾ.‌ ನನಗೆ ಸುಳ್ಳು ಹೇಳಲು ಬರುವುದಿಲ್ಲ. ಎಂದು ಶಾಸಕ ಧೀರಜ್ ಮುನಿರಾಜು ವಿರುದ್ಧ ಹರಿಹಾಯ್ದಿದ್ದಾರೆ.

ರಾಜಕೀಯ ಉದ್ದೇಶಕ್ಕೆ ವೃಷಭಾವತಿಗೆ ವಿರೋಧ..

ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರಿನ ಶುದ್ಧೀಕರಿಸಿದ ನೀರನ್ನು (ವೃಷಭಾವತಿ ನೀರನ್ನು) ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹರಿಸಬೇಕೆಂದು ಯೋಜನೆ ಪ್ರಾರಂಭ ಮಾಡಲಾಗಿತ್ತು. ಅಧಿವೇಶನದಲ್ಲಿ ಅಂದು ನೆಲಮಂಗಲದಲ್ಲಿ ಜೆಡಿಎಸ್ ಶಾಸಕರಾಗಿದ್ದ ಶ್ರೀನಿವಾಸ್ ಮೂರ್ತಿ ಸಹ ಒಪ್ಪಿಕೊಂಡಿದ್ದರು, ಡಿಪಿಆರ್, ಟೆಂಡರ್ ಸಹ ಆಗಿದೆ. ಈಗ ಆ ನೀರು ಸರಿ‌ ಇಲ್ಲ ಎಂದರೆ ಹೇಗೆ? ರಾಜಕೀಯ ಉದ್ದೇಶಕ್ಕಾಗಿ ಇಂದು ಅದನ್ನ ಬೇಡ ಎನ್ನುವುದು ಎಷ್ಟು ಸರಿ.? ಬಸ್ ಮಾಡಿಕೊಂಡು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಹೋಗಿ ಅಲ್ಲಿನ ರೈತರನ್ನ ಮಾತನಾಡಿಸಿ, ಯಾವ ರೀತಿ ಅನುಕೂಲವಾಗಿದೆ ಎಂದು ಕೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

17 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago