ತಾಲ್ಲೂಕಿನಲ್ಲಿ 220 ಮಂದಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ- ಚುನಾವಣಾಧಿಕಾರಿ ಎನ್. ತೇಜಸ್ ಕುಮಾರ್

ವಿಧಾನಸಭಾ ಕ್ಷೇತ್ರದ 276 ಮತಗಟ್ಟೆಗಳ ವ್ಯಾಪ್ತಿಯ 23 ಸೆಕ್ಟರ್ ಗಳಲ್ಲಿ ಒಟ್ಟು‌ 220 ಮಂದಿ ಹಿರಿಯ ನಾಗರಿಕರು(80 ವರ್ಷ ಮೆಲ್ಪಟ್ಟವರು) ಹಾಗೂ ವಿಶೇಷಚೇತನರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ಹೇಳಿದರು.

ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ‌ ಮಾತನಾಡಿದ ಅವರು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟವರು‌ 5004 ಇದ್ದಾರೆ. 3327 ಮಂದಿ‌ ವಿಕಲಚೇತನರಿದ್ದಾರೆ. ಮತಗಟ್ಟೆಗೆ ಬರಲಾಗದ 220 ಜನರಿಗೆ 12D ಫಾರಂ ನೀಡಿ, ವಾಪಸ್ ತರಿಸಿಕೊಂಡಿದ್ದೇವೆ.‌ ಏ.29 ಹಾಗೂ 30 ರಂದು ಮತದಾರರ ಮನೆಗೆ ಹೋಗಿ ಮತದಾನ‌ ಮಾಡಿಸಲಾಗುವುದು. ಮತದಾನದ ಗೌಪ್ಯತೆ ಕಾಪಾಡಲಾಗುವುದು ಎಂದು ಹೇಳಿದರು.

ಮನೆಯಿಂದ ಮತದಾನಕ್ಕಾಗಿ 18 ಬಸ್ ರೂಟ್ ಗುರುತಿಸಿದ್ದು, 18 ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಮತಗಟ್ಟೆ ಅಧಿಕಾರಿ, ಮೈಕ್ರೊ ಅಬ್ಸರ್ವರ್ , ವಿಡಿಯೊಗ್ರಾಫರ್, ಪೊಲೀಸರನ್ನು ಒಳಗೊಂಡ ತಂಡಗಳು ಕಾರ್ಯನಿರ್ವಹಿಸಲಿವೆ. ಕಂದಾಯ ನಿರೀಕ್ಷಕ, ಉಪ ತಹಶೀಲ್ದಾರ್, ಗ್ರಾಮ ಲೆಕ್ಕಿಗರು ತಂಡದಲ್ಲಿ ಇರುವರು. ಪ್ರತ್ಯೇಕ‌ ಕಂಫಾರ್ಟ್‌ಮೆಂಟ್ ಸಿದ್ದಪಡಿಸಿ ಮತ ಚಲಾವಣೆ ಮಾಡಿಸಲಾಗುವುದು ಎಂದು ವಿವರಿಸಿದರು.

ಉಳಿದಂತೆ ಎಲ್ಲ ಮತಗಟ್ಟೆಗಳಲ್ಲಿ ರ‌್ಯಾಂಪ್, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 2,14,166 ಮತದಾರರಿದ್ದಾರೆ. 58 ಮಂದಿ ಸೇವಾ ಮತದಾರರಿದ್ದಾರೆ ಎಂದು ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ಸಿ-ವಿಜಲ್ ಆ್ಯಪ್ ಮುಖಾಂತರ ಬಂದ ದೂರುಗಳನ್ನು ಪರಿಹರಿಸಲಾಗಿದೆ. ಚುನಾವಣೆ ಭದ್ರತೆಗೆ 1325 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 42 ಬಸ್ ಮಾರ್ಗ ಸೇರಿ 58 ರೂಟ್ ಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

79 ಮತಗಟ್ಟೆಗಳು ನಗರಸಭೆ ವ್ಯಾಪ್ತಿಯಲ್ಲಿ ಬರಲಿವೆ. ಉಳಿದೆಲ್ಲಾ ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿವೆ. ಮನೆಯಿಂದ ಮತದಾನ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮುಗಿಸುತ್ತೇವೆ‌ ಎಂದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

6 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

10 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

13 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

14 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago