ತಾಲ್ಲೂಕಿನಲ್ಲಿ 220 ಮಂದಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ- ಚುನಾವಣಾಧಿಕಾರಿ ಎನ್. ತೇಜಸ್ ಕುಮಾರ್

ವಿಧಾನಸಭಾ ಕ್ಷೇತ್ರದ 276 ಮತಗಟ್ಟೆಗಳ ವ್ಯಾಪ್ತಿಯ 23 ಸೆಕ್ಟರ್ ಗಳಲ್ಲಿ ಒಟ್ಟು‌ 220 ಮಂದಿ ಹಿರಿಯ ನಾಗರಿಕರು(80 ವರ್ಷ ಮೆಲ್ಪಟ್ಟವರು) ಹಾಗೂ ವಿಶೇಷಚೇತನರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ಹೇಳಿದರು.

ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ‌ ಮಾತನಾಡಿದ ಅವರು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟವರು‌ 5004 ಇದ್ದಾರೆ. 3327 ಮಂದಿ‌ ವಿಕಲಚೇತನರಿದ್ದಾರೆ. ಮತಗಟ್ಟೆಗೆ ಬರಲಾಗದ 220 ಜನರಿಗೆ 12D ಫಾರಂ ನೀಡಿ, ವಾಪಸ್ ತರಿಸಿಕೊಂಡಿದ್ದೇವೆ.‌ ಏ.29 ಹಾಗೂ 30 ರಂದು ಮತದಾರರ ಮನೆಗೆ ಹೋಗಿ ಮತದಾನ‌ ಮಾಡಿಸಲಾಗುವುದು. ಮತದಾನದ ಗೌಪ್ಯತೆ ಕಾಪಾಡಲಾಗುವುದು ಎಂದು ಹೇಳಿದರು.

ಮನೆಯಿಂದ ಮತದಾನಕ್ಕಾಗಿ 18 ಬಸ್ ರೂಟ್ ಗುರುತಿಸಿದ್ದು, 18 ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಮತಗಟ್ಟೆ ಅಧಿಕಾರಿ, ಮೈಕ್ರೊ ಅಬ್ಸರ್ವರ್ , ವಿಡಿಯೊಗ್ರಾಫರ್, ಪೊಲೀಸರನ್ನು ಒಳಗೊಂಡ ತಂಡಗಳು ಕಾರ್ಯನಿರ್ವಹಿಸಲಿವೆ. ಕಂದಾಯ ನಿರೀಕ್ಷಕ, ಉಪ ತಹಶೀಲ್ದಾರ್, ಗ್ರಾಮ ಲೆಕ್ಕಿಗರು ತಂಡದಲ್ಲಿ ಇರುವರು. ಪ್ರತ್ಯೇಕ‌ ಕಂಫಾರ್ಟ್‌ಮೆಂಟ್ ಸಿದ್ದಪಡಿಸಿ ಮತ ಚಲಾವಣೆ ಮಾಡಿಸಲಾಗುವುದು ಎಂದು ವಿವರಿಸಿದರು.

ಉಳಿದಂತೆ ಎಲ್ಲ ಮತಗಟ್ಟೆಗಳಲ್ಲಿ ರ‌್ಯಾಂಪ್, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 2,14,166 ಮತದಾರರಿದ್ದಾರೆ. 58 ಮಂದಿ ಸೇವಾ ಮತದಾರರಿದ್ದಾರೆ ಎಂದು ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ಸಿ-ವಿಜಲ್ ಆ್ಯಪ್ ಮುಖಾಂತರ ಬಂದ ದೂರುಗಳನ್ನು ಪರಿಹರಿಸಲಾಗಿದೆ. ಚುನಾವಣೆ ಭದ್ರತೆಗೆ 1325 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 42 ಬಸ್ ಮಾರ್ಗ ಸೇರಿ 58 ರೂಟ್ ಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

79 ಮತಗಟ್ಟೆಗಳು ನಗರಸಭೆ ವ್ಯಾಪ್ತಿಯಲ್ಲಿ ಬರಲಿವೆ. ಉಳಿದೆಲ್ಲಾ ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿವೆ. ಮನೆಯಿಂದ ಮತದಾನ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮುಗಿಸುತ್ತೇವೆ‌ ಎಂದರು.

Ramesh Babu

Journalist

Recent Posts

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

5 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago