ತಾಲ್ಲೂಕಿನಲ್ಲಿ 220 ಮಂದಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ- ಚುನಾವಣಾಧಿಕಾರಿ ಎನ್. ತೇಜಸ್ ಕುಮಾರ್

ವಿಧಾನಸಭಾ ಕ್ಷೇತ್ರದ 276 ಮತಗಟ್ಟೆಗಳ ವ್ಯಾಪ್ತಿಯ 23 ಸೆಕ್ಟರ್ ಗಳಲ್ಲಿ ಒಟ್ಟು‌ 220 ಮಂದಿ ಹಿರಿಯ ನಾಗರಿಕರು(80 ವರ್ಷ ಮೆಲ್ಪಟ್ಟವರು) ಹಾಗೂ ವಿಶೇಷಚೇತನರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ಹೇಳಿದರು.

ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ‌ ಮಾತನಾಡಿದ ಅವರು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟವರು‌ 5004 ಇದ್ದಾರೆ. 3327 ಮಂದಿ‌ ವಿಕಲಚೇತನರಿದ್ದಾರೆ. ಮತಗಟ್ಟೆಗೆ ಬರಲಾಗದ 220 ಜನರಿಗೆ 12D ಫಾರಂ ನೀಡಿ, ವಾಪಸ್ ತರಿಸಿಕೊಂಡಿದ್ದೇವೆ.‌ ಏ.29 ಹಾಗೂ 30 ರಂದು ಮತದಾರರ ಮನೆಗೆ ಹೋಗಿ ಮತದಾನ‌ ಮಾಡಿಸಲಾಗುವುದು. ಮತದಾನದ ಗೌಪ್ಯತೆ ಕಾಪಾಡಲಾಗುವುದು ಎಂದು ಹೇಳಿದರು.

ಮನೆಯಿಂದ ಮತದಾನಕ್ಕಾಗಿ 18 ಬಸ್ ರೂಟ್ ಗುರುತಿಸಿದ್ದು, 18 ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಮತಗಟ್ಟೆ ಅಧಿಕಾರಿ, ಮೈಕ್ರೊ ಅಬ್ಸರ್ವರ್ , ವಿಡಿಯೊಗ್ರಾಫರ್, ಪೊಲೀಸರನ್ನು ಒಳಗೊಂಡ ತಂಡಗಳು ಕಾರ್ಯನಿರ್ವಹಿಸಲಿವೆ. ಕಂದಾಯ ನಿರೀಕ್ಷಕ, ಉಪ ತಹಶೀಲ್ದಾರ್, ಗ್ರಾಮ ಲೆಕ್ಕಿಗರು ತಂಡದಲ್ಲಿ ಇರುವರು. ಪ್ರತ್ಯೇಕ‌ ಕಂಫಾರ್ಟ್‌ಮೆಂಟ್ ಸಿದ್ದಪಡಿಸಿ ಮತ ಚಲಾವಣೆ ಮಾಡಿಸಲಾಗುವುದು ಎಂದು ವಿವರಿಸಿದರು.

ಉಳಿದಂತೆ ಎಲ್ಲ ಮತಗಟ್ಟೆಗಳಲ್ಲಿ ರ‌್ಯಾಂಪ್, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 2,14,166 ಮತದಾರರಿದ್ದಾರೆ. 58 ಮಂದಿ ಸೇವಾ ಮತದಾರರಿದ್ದಾರೆ ಎಂದು ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ಸಿ-ವಿಜಲ್ ಆ್ಯಪ್ ಮುಖಾಂತರ ಬಂದ ದೂರುಗಳನ್ನು ಪರಿಹರಿಸಲಾಗಿದೆ. ಚುನಾವಣೆ ಭದ್ರತೆಗೆ 1325 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 42 ಬಸ್ ಮಾರ್ಗ ಸೇರಿ 58 ರೂಟ್ ಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

79 ಮತಗಟ್ಟೆಗಳು ನಗರಸಭೆ ವ್ಯಾಪ್ತಿಯಲ್ಲಿ ಬರಲಿವೆ. ಉಳಿದೆಲ್ಲಾ ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿವೆ. ಮನೆಯಿಂದ ಮತದಾನ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮುಗಿಸುತ್ತೇವೆ‌ ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago