ತಾಲ್ಲೂಕಿನಲ್ಲಿ 220 ಮಂದಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ- ಚುನಾವಣಾಧಿಕಾರಿ ಎನ್. ತೇಜಸ್ ಕುಮಾರ್

ವಿಧಾನಸಭಾ ಕ್ಷೇತ್ರದ 276 ಮತಗಟ್ಟೆಗಳ ವ್ಯಾಪ್ತಿಯ 23 ಸೆಕ್ಟರ್ ಗಳಲ್ಲಿ ಒಟ್ಟು‌ 220 ಮಂದಿ ಹಿರಿಯ ನಾಗರಿಕರು(80 ವರ್ಷ ಮೆಲ್ಪಟ್ಟವರು) ಹಾಗೂ ವಿಶೇಷಚೇತನರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ಹೇಳಿದರು.

ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ‌ ಮಾತನಾಡಿದ ಅವರು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟವರು‌ 5004 ಇದ್ದಾರೆ. 3327 ಮಂದಿ‌ ವಿಕಲಚೇತನರಿದ್ದಾರೆ. ಮತಗಟ್ಟೆಗೆ ಬರಲಾಗದ 220 ಜನರಿಗೆ 12D ಫಾರಂ ನೀಡಿ, ವಾಪಸ್ ತರಿಸಿಕೊಂಡಿದ್ದೇವೆ.‌ ಏ.29 ಹಾಗೂ 30 ರಂದು ಮತದಾರರ ಮನೆಗೆ ಹೋಗಿ ಮತದಾನ‌ ಮಾಡಿಸಲಾಗುವುದು. ಮತದಾನದ ಗೌಪ್ಯತೆ ಕಾಪಾಡಲಾಗುವುದು ಎಂದು ಹೇಳಿದರು.

ಮನೆಯಿಂದ ಮತದಾನಕ್ಕಾಗಿ 18 ಬಸ್ ರೂಟ್ ಗುರುತಿಸಿದ್ದು, 18 ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಮತಗಟ್ಟೆ ಅಧಿಕಾರಿ, ಮೈಕ್ರೊ ಅಬ್ಸರ್ವರ್ , ವಿಡಿಯೊಗ್ರಾಫರ್, ಪೊಲೀಸರನ್ನು ಒಳಗೊಂಡ ತಂಡಗಳು ಕಾರ್ಯನಿರ್ವಹಿಸಲಿವೆ. ಕಂದಾಯ ನಿರೀಕ್ಷಕ, ಉಪ ತಹಶೀಲ್ದಾರ್, ಗ್ರಾಮ ಲೆಕ್ಕಿಗರು ತಂಡದಲ್ಲಿ ಇರುವರು. ಪ್ರತ್ಯೇಕ‌ ಕಂಫಾರ್ಟ್‌ಮೆಂಟ್ ಸಿದ್ದಪಡಿಸಿ ಮತ ಚಲಾವಣೆ ಮಾಡಿಸಲಾಗುವುದು ಎಂದು ವಿವರಿಸಿದರು.

ಉಳಿದಂತೆ ಎಲ್ಲ ಮತಗಟ್ಟೆಗಳಲ್ಲಿ ರ‌್ಯಾಂಪ್, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 2,14,166 ಮತದಾರರಿದ್ದಾರೆ. 58 ಮಂದಿ ಸೇವಾ ಮತದಾರರಿದ್ದಾರೆ ಎಂದು ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ಸಿ-ವಿಜಲ್ ಆ್ಯಪ್ ಮುಖಾಂತರ ಬಂದ ದೂರುಗಳನ್ನು ಪರಿಹರಿಸಲಾಗಿದೆ. ಚುನಾವಣೆ ಭದ್ರತೆಗೆ 1325 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 42 ಬಸ್ ಮಾರ್ಗ ಸೇರಿ 58 ರೂಟ್ ಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

79 ಮತಗಟ್ಟೆಗಳು ನಗರಸಭೆ ವ್ಯಾಪ್ತಿಯಲ್ಲಿ ಬರಲಿವೆ. ಉಳಿದೆಲ್ಲಾ ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿವೆ. ಮನೆಯಿಂದ ಮತದಾನ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮುಗಿಸುತ್ತೇವೆ‌ ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

17 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago