ವಿಧಾನಸಭಾ ಕ್ಷೇತ್ರದ 276 ಮತಗಟ್ಟೆಗಳ ವ್ಯಾಪ್ತಿಯ 23 ಸೆಕ್ಟರ್ ಗಳಲ್ಲಿ ಒಟ್ಟು 220 ಮಂದಿ ಹಿರಿಯ ನಾಗರಿಕರು(80 ವರ್ಷ ಮೆಲ್ಪಟ್ಟವರು) ಹಾಗೂ ವಿಶೇಷಚೇತನರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ಹೇಳಿದರು.
ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟವರು 5004 ಇದ್ದಾರೆ. 3327 ಮಂದಿ ವಿಕಲಚೇತನರಿದ್ದಾರೆ. ಮತಗಟ್ಟೆಗೆ ಬರಲಾಗದ 220 ಜನರಿಗೆ 12D ಫಾರಂ ನೀಡಿ, ವಾಪಸ್ ತರಿಸಿಕೊಂಡಿದ್ದೇವೆ. ಏ.29 ಹಾಗೂ 30 ರಂದು ಮತದಾರರ ಮನೆಗೆ ಹೋಗಿ ಮತದಾನ ಮಾಡಿಸಲಾಗುವುದು. ಮತದಾನದ ಗೌಪ್ಯತೆ ಕಾಪಾಡಲಾಗುವುದು ಎಂದು ಹೇಳಿದರು.
ಮನೆಯಿಂದ ಮತದಾನಕ್ಕಾಗಿ 18 ಬಸ್ ರೂಟ್ ಗುರುತಿಸಿದ್ದು, 18 ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಮತಗಟ್ಟೆ ಅಧಿಕಾರಿ, ಮೈಕ್ರೊ ಅಬ್ಸರ್ವರ್ , ವಿಡಿಯೊಗ್ರಾಫರ್, ಪೊಲೀಸರನ್ನು ಒಳಗೊಂಡ ತಂಡಗಳು ಕಾರ್ಯನಿರ್ವಹಿಸಲಿವೆ. ಕಂದಾಯ ನಿರೀಕ್ಷಕ, ಉಪ ತಹಶೀಲ್ದಾರ್, ಗ್ರಾಮ ಲೆಕ್ಕಿಗರು ತಂಡದಲ್ಲಿ ಇರುವರು. ಪ್ರತ್ಯೇಕ ಕಂಫಾರ್ಟ್ಮೆಂಟ್ ಸಿದ್ದಪಡಿಸಿ ಮತ ಚಲಾವಣೆ ಮಾಡಿಸಲಾಗುವುದು ಎಂದು ವಿವರಿಸಿದರು.
ಉಳಿದಂತೆ ಎಲ್ಲ ಮತಗಟ್ಟೆಗಳಲ್ಲಿ ರ್ಯಾಂಪ್, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 2,14,166 ಮತದಾರರಿದ್ದಾರೆ. 58 ಮಂದಿ ಸೇವಾ ಮತದಾರರಿದ್ದಾರೆ ಎಂದು ಹೇಳಿದರು.
ಚುನಾವಣೆಗೆ ಸಂಬಂಧಿಸಿದಂತೆ ಸಿ-ವಿಜಲ್ ಆ್ಯಪ್ ಮುಖಾಂತರ ಬಂದ ದೂರುಗಳನ್ನು ಪರಿಹರಿಸಲಾಗಿದೆ. ಚುನಾವಣೆ ಭದ್ರತೆಗೆ 1325 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 42 ಬಸ್ ಮಾರ್ಗ ಸೇರಿ 58 ರೂಟ್ ಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
79 ಮತಗಟ್ಟೆಗಳು ನಗರಸಭೆ ವ್ಯಾಪ್ತಿಯಲ್ಲಿ ಬರಲಿವೆ. ಉಳಿದೆಲ್ಲಾ ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿವೆ. ಮನೆಯಿಂದ ಮತದಾನ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮುಗಿಸುತ್ತೇವೆ ಎಂದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…