ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.
ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.
ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.
ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…
ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ....…
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ. ಪಟ್ಟಣ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ. ಈ ಕ್ರೀಡಾಕೂಟದಲ್ಲಿ ಜೈ…