ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.
ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.
ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…